Advertisement

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

10:30 AM Oct 14, 2024 | Team Udayavani |

ಬೆಳ್ತಂಗಡಿ: ತಾಲೂಕಿನ ನೆರಿಯದಲ್ಲಿ ನದಿಗೆ ಇಳಿದಿದ್ದ ತೋಟತ್ತಾಡಿ ನಿವಾಸಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ರವಿವಾರ ರಾತ್ರಿ (ಅ.13ರಂದು) ನಡೆದಿದೆ.

Advertisement

ತೋಟತ್ತಾಡಿ ಗ್ರಾಮದ ಪಿತ್ತಿಲು ನಿವಾಸಿ ಶಿವಕುಮಾರ್ ಮೃತಪಟ್ಟ ಯುವಕ.

ಈತ ರವಿವಾರ ಗೆಳೆಯರೊಂದಿಗೆ  ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ಮೀನು ಹಿಡಿಯಲು ನದಿಗೆ ತೆರಳಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ಈತ ನಾಪತ್ತೆಯಾಗಿದ್ದ. ಈತನಿಗಾಗಿ ಸ್ಥಳೀಯರು ಹುಡುಕಾಟ ನಡೆಸಿದ್ದರು. ತಡರಾತ್ರಿ ಮೃತದೇಹ ಪತ್ತೆಯಾಗಿದೆ.

ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next