Advertisement
ಕದ್ರಿ ಮತ್ತು ಅಜ್ಜರಕಾಡಿನ ಲ್ಲಿರುವ ಯೋಧರ ಸ್ಮಾರಕದಲ್ಲಿ ಜಿಲ್ಲಾ ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾ ಸೈನಿಕರ ಪರವಾಗಿಯೂ ಗೌರವ ನಮನ ಸಲ್ಲಿಸಲಾಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ಕಾರ್ಣಿಕ್ ಮಾತನಾಡಿ, ಉಗ್ರರು ಹೇಯ ಕೃತ್ಯನಡೆಸಿದ್ದಾರೆ. ಸೈನಿಕರನ್ನು ಗೌರವಿಸುವ ಮನೋಭಾವ ನಮ್ಮಲ್ಲಿ ಮೊದಲು ಜಾಗೃತವಾಗ ಬೇಕು. ಪ್ರತ್ಯೇಕತೆ, ಜಾತೀಯತೆ, ಸಂಕುಚಿತ ಭಾವನೆ ತೊರೆದು ದೇಶ ರಕ್ಷಕರನ್ನು ಸದಾ ಸ್ಮರಣೀಯವಾಗಿಸೋಣ ಎಂದರು.
Related Articles
Advertisement
ವಿಹಿಂಪ ಹಾಗೂ ಬಜರಂಗದಳ ನೇತೃತ್ವದಲ್ಲಿ ಮಂಗಳೂರಿನ ಪಿವಿಎಸ್ ಸರ್ಕಲ್ನಲ್ಲಿ ಮತ್ತು ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದಲ್ಲಿ ಬೆಳಗ್ಗೆ ಪಾಕಿಸ್ಥಾನದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಹುತಾತ್ಮ ಭಾರತೀಯ ಯೋಧರಿಗೆ ಇದೇ ವೇಳೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಉಗ್ರರ ಕೃತ್ಯ ಖಂಡಿಸಿ ಉಳ್ಳಾಲ ದರ್ಗಾ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ಖಂಡನಾ ಖುತಾº ನಡೆಸಿ, ಪ್ರಾರ್ಥನೆ ಸಲ್ಲಿಸಲಾಯಿತು.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ವತಿಯಿಂದ ನಡೆದ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಹುತಾತ್ಮ ಸ್ಮಾರಕದಲ್ಲಿ ಬಿಜೆಪಿ ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ನಮನ ಸಲ್ಲಿಸಿದರು. ಜಿಲ್ಲಾ ನಾಗರಿಕ ಸಮಿತಿ, ಕರವೇ ಘಟಕದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಡಿಕೇರಿ, ಶನಿವಾರಸಂತೆ, ಗೋಣಿಕೊಪ್ಪಲು ಸಹಿತ ಕೊಡಗಿನ ವಿವಿಧೆಡೆ ಪ್ರತಿಭಟನೆ, ಶ್ರದ್ಧಾಂಜಲಿ ಸಭೆ ನಡೆಯಿತು.
ಸೈನಿಕರ ಮೇಲಿನ ದಾಳಿ ಅಮಾನವೀಯ ಹಾಗೂ ಹೇಯ ಕೃತ್ಯ. ಉಗ್ರರಿಗೆ ತೀರುಗೇಟು ನೀಡಲೇ ಬೇಕು. ಕೇಂದ್ರ ಸರಕಾರದ ಜತೆ ಈ ಸಂದರ್ಭದಲ್ಲಿ ನಾವಿದ್ದೇವೆ. ಹುತಾತ್ಮ ಸೈನಿಕರ ಕುಟುಂಬಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ .– ಯು.ಟಿ. ಖಾದರ್, ಸಚಿವ