Advertisement

ಸಿಎಂ ಮಾಧ್ಯಮ ಹೇಳಿಕೆಗೆ ವ್ಯಾಪಕ ಆಕ್ಷೇಪ

01:13 AM Apr 12, 2019 | Sriram |

ಬೆಂಗಳೂರು: “ಮಾಧ್ಯಮಗಳ ಮೇಲೆ ಜೆಡಿಎಸ್‌ ಕಾರ್ಯಕರ್ತರು ಹಲ್ಲೆ ಮಾಡಿದರೆ ನನ್ನನ್ನು ಹೊಣೆ ಮಾಡಬೇಡಿ’ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಮೈತ್ರಿ ಪಕ್ಷ ಕಾಂಗ್ರೆಸ್‌, ಪ್ರತಿಪಕ್ಷ ಬಿಜೆಪಿ ಸೇರಿ ಹಲವು ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ, ಲೋಕಸಭಾ ಚುನಾವಣೆಯಲ್ಲಿ ಸೋಲುವ ಮುನ್ಸೂಚನೆ ದೊರೆತು ಸಿಎಂ ಹತಾಶರಾಗಿದ್ದಾರೆ. ಮುಖ್ಯಮಂತ್ರಿಗಳೇ ಜನರನ್ನು ಮಾಧ್ಯಮದವರ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಕೆ.ಎಸ್‌.ಈಶ್ವರಪ್ಪ ಮಾತನಾಡಿ,ಮಾಧ್ಯಮದ ವಿರುದ್ಧ ಹೋಗಿದ್ದಕ್ಕೆ ಇಂದಿರಾ ಗಾಂಧಿ ಅಧಿಕಾರ ಕಳೆದುಕೊಂಡರು. ಈಗ ಕುಮಾರಸ್ವಾಮಿಗೆ ಕೊನೆಗಾಲ ಬಂದಿದೆ ಎಂದು ಹೇಳಿದ್ದಾರೆ.

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಮಾತನಾಡಿ, ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು ಅವರು ಈ ರೀತಿ ಬೆದರಿಕೆ ಹಾಕಿದರೆ, ನನ್ನಂತಹ ಜನಸಾಮಾನ್ಯರಿಗೆ ರಕ್ಷಣೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು ಕೇಂದ್ರ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಮಾತನಾಡಿ, ಮಾಧ್ಯಮಗಳ ಮೇಲೆ ಹಲ್ಲೆ ಮಾಡುವುದು ಸರಿಯಲ್ಲ. ಅದನ್ನು ಯಾರೂ ಬೆಂಬಲಿಸಬಾರದು ಎಂದಿದ್ದಾರೆ. ಆದರೆ, ಜೆಡಿಎಸ್‌ ನಾಯಕರು ಈ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next