Advertisement

ದೂರು ಆಧರಿಸಿ ಸಭೆ ನಡೆದಿಲ್ಲ: ಸತೀಶ ಜಾರಕಿಹೊಳಿ

06:35 AM Sep 02, 2018 | Team Udayavani |

ಬೆಳಗಾವಿ: “ಪೂರ್ವನಿಯೋಜಿತ ಕಾರ್ಯಕ್ರಮ ಇರುವುದರಿಂದ ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಕರೆದಿದ್ದ ಸಭೆಗೆ ನಾನು ಹೋಗಿಲ್ಲ.

Advertisement

ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈ ಸಭೆ ಕರೆಯಲಾಗಿತ್ತು’ ಎಂದು ಶಾಸಕ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಟಾಳಕರ್‌ ಅವರ ದೂರು ಆಧರಿಸಿ ವೇಣುಗೋಪಾಲ ಅವರು ಸಭೆ ಕರೆದಿಲ್ಲ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಮಾತ್ರ ಚರ್ಚೆ ನಡೆಯುತ್ತದೆ’ಎಂದರು.

Advertisement

Udayavani is now on Telegram. Click here to join our channel and stay updated with the latest news.

Next