Advertisement

ಸಚಿವ ಸ್ಥಾನಕ್ಕೆ ಹಠ ಹಿಡಿದಿಲ್ಲ: ಹೊರಟ್ಟಿ

06:25 AM Nov 05, 2018 | |

ಧಾರವಾಡ: “ನನಗೆ ಸಚಿವ ಸ್ಥಾನ ನೀಡುತ್ತಿರುವುದು ಗೊತ್ತಿಲ್ಲ. ಈ ಬಗ್ಗೆ ಮಾಧ್ಯಮಗಳ ಮೂಲಕವೇ ಗೊತ್ತಾಗಿದ್ದು ಬಿಟ್ಟರೆ ಈ ವಿಷಯವಾಗಿ ಯಾರೂ ನನ್ನೊಂದಿಗೆ ಮಾತನಾಡಿಲ್ಲ’ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತೂ ಸಚಿವ ಸ್ಥಾನ ಬೇಕೆಂದು ಎಂದಿಗೂ ಹಠ ಹಿಡಿದಿಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಸಚಿವ ಸ್ಥಾನ ನೀಡಿಕೆ ವಿಚಾರದಲ್ಲಿ ನಮ್ಮ ನಾಯಕರಾದ ಎಚ್‌.ಡಿ. ದೇವೇಗೌಡ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ನನಗೆ ಸಚಿವ ಸ್ಥಾನ ನೀಡಿದರೂ ಖುಷಿಯೇ, ನೀಡದಿದ್ದರೂ ಖುಷಿಯೇ. ಸಾಕಷ್ಟು ಗೌರವ ಇರುವ ಸಭಾಪತಿ ಸ್ಥಾನ ಕೊಟ್ಟಿರುವುದಕ್ಕೆ ಸಮಾಧಾನ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next