Advertisement

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

02:48 PM Oct 06, 2024 | Team Udayavani |

ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆ ನಗರದ ಹಳೆಯ ದೇಸಾಯಿ ಗ್ಯಾಸ್ ಗೋದಾಮು ಬಳಿಯ ಅಪರ್ಣಾ ಅಪಾರ್ಟ್‌ಮೆಂಟ್ ಆವರಣದಲ್ಲಿ ಸ್ಥಾಪಿಸಲಾದ ಶ್ರೀ ಗುರು ದತ್ತಾತ್ರೇಯ ಮಂದಿರದಲ್ಲಿ ಪ್ರತಿಷ್ಠಿಸಲಾಗಿದ್ದ‌ ದತ್ತಾತ್ರೇಯ ದೇವರ ನಾಲ್ಕು ಕೈಗಳನ್ನು ದುಷ್ಕರ್ಮಿಗಳು ರವಿವಾರ (ಅ.6ರಂದು) ಬೆಳಗ್ಗೆ ಧ್ವಂಸಗೊಳಿಸಿದ್ದಾರೆ‌.

Advertisement

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪಾಲಿಕೆ ಸದಸ್ಯೆ ರೂಪಾ ಶೆಟ್ಟಿ, ಬಿಜೆಪಿ ವಕ್ತಾರ ರವಿ ನಾಯ್ಕ, ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ್ಟ್‌ಮೆಂಟ್‌ನ ಕಾರ್ಯದರ್ಶಿ ರೇಣುಕಾ ಗೆಜ್ಜಿಹಳ್ಳಿ ಮತ್ತು ಸ್ಥಳೀಯ ನಿವಾಸಿಗಳು ಜಮಾಯಿಸಿದ್ದಾರೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಮಹಾನಿಂಗ ನಂದಗಾಂವಿ, ಉಪನಗರ ಠಾಣೆ ಇನ್ಸ್‌ಪೆಕ್ಟರ್ ಎಂ.ಎಸ್. ಹೂಗಾರ ಭೇಟಿ ಕೊಟ್ಟು ಪರಿಶೀಲಿಸಿದರು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ಅಪಾರ್ಟ್‌ಮೆಂಟ್‌ನ ಆವರಣದಲ್ಲಿ ದತ್ತಾತ್ರೇಯ ಮೂರ್ತಿಯನ್ನು ಕಳೆದ 11 ವರ್ಷದ ಹಿಂದೆ ಪ್ರತಿಷ್ಠಿಸಲಾಗಿತ್ತು.

ಮಾಹಿತಿ ಪಡೆದ ಶಾಸಕ ಮಹೇಶ ಟೆಂಗಿನಕಾಯಿ:

Advertisement

ಇಲ್ಲಿನ ದೇಶಪಾಂಡೆ ನಗರದ ಹಳೆಯ ದೇಸಾಯಿ ಗ್ಯಾಸ್ ಗೋದಾಮು ಬಳಿಯ ಅಪರ್ಣಾ ಅಪಾರ್ಟ್‌ಮೆಂಟ್ ಆವರಣದಲ್ಲಿ ಸ್ಥಾಪಿಸಲಾದ ಶ್ರೀ ಗುರು ದತ್ತಾತ್ರೇಯ ಮಂದಿರದಲ್ಲಿ ಪ್ರತಿಷ್ಠಿಸಲಾಗಿದ್ದ‌ ದತ್ತಾತ್ರೇಯ ದೇವರ ನಾಲ್ಕು ಕೈಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಸ್ಥಳಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ಕೊಟ್ಟು ಪರಿಶೀಲಿಸಿದರು ಮತ್ತು ಸ್ಥಳೀಯರಿಂದ ಘಟನೆಯ ಕುರಿತು ಮಾಹಿತಿ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next