Advertisement

ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಅಧಿಕಾರ ಗಟ್ಟಿಯಾಗುತ್ತೆ: ಸಿದ್ದರಾಮಯ್ಯ

09:14 PM Mar 12, 2024 | Team Udayavani |

ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂದು ಹೇಳ್ತಾರಲ್ಲ, ಅಂಥವರೇ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದು. ಈ ನಗರಕ್ಕೆ ಹಿಂದಿನ ಅವಧಿಯಲ್ಲಿ 12 ಬಾರಿ, ಈ ಅವಧಿಯಲ್ಲಿ 2 ಬಾರಿ ಬಂದೆ. ಬಂದಷ್ಟೂ ನನ್ನ ಅಧಿಕಾರ ಗಟ್ಟಿಯಾಗುತ್ತದೆ. ಇಲ್ಲಿ ವಾಸಿಸುವವರು ಜನರಲ್ಲವಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

Advertisement

ನಗರದಲ್ಲಿ ಗ್ಯಾರಂಟಿ ಫ‌ಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿ, ಬಸವಣ್ಣನವರು ಕಂದಾಚಾರ, ಮೂಢನಂಬಿಕೆಗಳನ್ನು ನಂಬಬೇಡಿ ಎಂದು ಹೇಳಿದರು. ನಮ್ಮ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಹಿಂದಿನ ಯಾವ ಮುಖ್ಯಮಂತ್ರಿಯೂ ಇದನ್ನು ಮಾಡಿರಲಿಲ್ಲ. ಎಲ್ಲ ಸರ್ಕಾರಿ ಕಚೇರಿ, ವಿವಿ, ಕಾಲೇಜುಗಳಲ್ಲಿ ಬಸವಣ್ಣನವರ ಭಾವಚಿತ್ರ ಹಾಕಲು ಆದೇಶ ಹೊರಡಿಸಿದ್ದೇವೆ. ಇದನ್ನು ಬಿಜೆಪಿಯವರು ಮಾಡಿದ್ರಾ? ಎಂದು ಕೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next