Advertisement

ಡಿಸ್ನಿಲ್ಯಾಂಡ್‌ ವಿರೋಧಿಸಿ ತಮಟೆ ಚಳವಳಿ

07:00 AM Jan 14, 2019 | Team Udayavani |

ಮೈಸೂರು: ವಿಶ್ವವಿಖ್ಯಾತ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಜಲಾಶಯದ ಬಳಿ ರಾಜ್ಯ ಸರ್ಕಾರ ಸಹಸ್ರಾರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಿಸ್ನಿಲ್ಯಾಂಡ್‌ ಯೋಜನೆಯನ್ನು ಕೈಬಿಡದಿದ್ದಲ್ಲಿ ಕರ್ನಾಟಕ ಬಂದ್‌ ಮಾಡಬೇಕಾಗುತ್ತದೆ ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಎಚ್ಚರಿಕೆ ನೀಡಿದರು.

Advertisement

ಮೈಸೂರು ನಗರ ರೈಲು ನಿಲ್ದಾಣದ ಬಳಿ ಭಾನುವಾರ ತಮಟೆ ಚಳವಳಿ ನಡೆಸಿದ ಅವರು, ಕೆಆರ್‌ಎಸ್‌ನಲ್ಲಿ ರಾಜ್ಯ ಸರ್ಕಾರ ಡಿಸ್ನಿಲ್ಯಾಂಡ್‌ ಮಾಡಲು ಹೊರಟಿರುವುದು ಸರಿಯಲ್ಲ. ಈ ಕಾಮಗಾರಿಯಿಂದ ಕೆಆರ್‌ಎಸ್‌ ಜಲಾಶಯದ ತಳಪಾಯಕ್ಕೆ ಧಕ್ಕೆಯಾಗುತ್ತದೆ. ಹೀಗಾಗಿ ಸರ್ಕಾರ ಕೂಡಲೇ ಈ ಯೋಜನೆಯನ್ನು ಕೈ ಬಿಡಬೇಕು. ಇಲ್ಲವಾದಲ್ಲಿ ಹಂತ ಹಂತವಾಗಿ ಹೋರಾಟ ನಡೆಸಲಾಗುವುದು.

ಕರ್ನಾಟಕ ಬಂದ್‌, ಕೆಆರ್‌ಎಸ್‌ಗೆ ಮುತ್ತಿಗೆಯಂತಹ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ, ಎಂ.ಚಂದ್ರಶೇಖರ್‌, ಗಿರೀಶ್‌ ಗೌಡ ಮೊದಲಾದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next