Advertisement

ಶರತ್‌ ಹತ್ಯೆ ಹಿಂದೆ ಕೆಲ ಮುಸ್ಲಿಂ ಸಂಸ್ಥೆಗಳ ಕೈವಾಡ: ಈಶ್ವರಪ್ಪ

03:40 AM Jul 15, 2017 | |

ಬಾಗಲಕೋಟೆ: ರಾಜ್ಯದಲ್ಲಿ ಕೊಲೆಗಡುಕ ಮುಸ್ಲಿಮರಿಂದ ಹಿಂದೂ ಸಂಘಟನೆ ಹಾಗೂ ಆರೆಸ್ಸೆಸ್‌ ಮುಖಂಡರ ಹತ್ಯೆ ಆಗುತ್ತಿದೆ. ಇದರಲ್ಲಿ ಕೆಲ ಮುಸ್ಲಿಂ ಸಂಸ್ಥೆಗಳ ಕೈವಾಡವೂ ಇದೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ ಆರೋಪಿಸಿದರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳ ಹತ್ಯೆಯಾಗುತ್ತಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಉಡಾಫೆ ಉತ್ತರ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆರೆಸ್ಸೆಸ್‌ ಕಾರ್ಯಕರ್ತ ಶರತ್‌ ಕೊಲೆ ಪ್ರಕರಣ ಮುಚ್ಚಿ ಹಾಕಿದರು. ಕೊಲೆಗಡುಕರನ್ನು ಇಂದಿಗೂ ಬಂಧಿಸಿಲ್ಲ. ರಾಜ್ಯದಲ್ಲಿ ಅರಾಜಕತೆ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.

ಕೊಲೆಗಡುಕ ಮುಸ್ಲಿಮರ ವಿರುದ್ಧ ಕ್ರಮ ಕೈಗೊಂಡರೆ ವೋಟ್‌ ಬ್ಯಾಂಕ್‌ ಕೈ ತಪ್ಪುತ್ತದೆ ಎಂಬ ಭಯ ಮುಖ್ಯಮಂತ್ರಿಗಳಿಗಿದೆ. ಹೀಗಾಗಿ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಕಲ್ಲಡ್ಕ ಪ್ರಭಾಕರ ಭಟ್‌ ಅವರನ್ನು ಬಂಧಿಸಿದರೆ ರಾಜ್ಯ ಹೊತ್ತಿ ಉರಿಯುತ್ತದೆ ಎಂದು ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಲ್ಲಡ್ಕ ಪ್ರಭಾಕರ ಭಟ್‌ ಅವರು ಶರತ್‌ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಹೋರಾಟ ಮಾಡಿದ್ದೇ ತಪ್ಪಾ? ಶರತ್‌ ಕೊಲೆಯಾದರೂ ಸುಮ್ಮನೆ ಕೂರಬೇಕಾ? ಯಾರು ಕೊಲೆ ಮಾಡಿದ್ದಾರೋ ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ಸೂಜಿಯಿಂದ ಹೊಲಿಯುವುದು ನಮ್ಮ ಕೆಲಸ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಿಜೆಪಿಯವರು ಕತ್ತರಿಯಿಂದ ಕತ್ತರಿಸಿದ್ದನ್ನು ಸೂಜಿಯಿಂದ ಹೊಲಿಯುವುದು ನಮ್ಮ ಕೆಲಸವಾಗಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎಂದು ಏನೇನೊ ಆಟ ಆಡುತ್ತಿದ್ದಾರೆ. ಬಿಜೆಪಿ ನಾಯಕರು ಏನೇ ತಿಪ್ಪರಲಾಗ ಹಾಕಿದರೂ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next