Advertisement

ಅಂತೂ ಯಕ್ಷಗಾನ ಅಕಾಡೆಮಿಗೂ ಸಾಧಕರ ಹೆಸರು ಶಿಫಾರಸಿಗೆ ಸೂಚನೆ

11:14 AM Oct 27, 2018 | |

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗಾಗಿ ಸಾಧಕರನ್ನು ಶಿಫಾರಸು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಡವಾಗಿ ಸಂಪರ್ಕಿಸಿ ಹೇಳಿದೆ. ರಾಜ್ಯೋತ್ಸವ ಪ್ರಶಸ್ತಿಗಾಗಿ ನಡೆಸಲಾಗುತ್ತಿರುವ ಲಾಬಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಕ್ಷಗಾನ ಅಕಾಡೆಮಿಯನ್ನೇ ನಿರ್ಲಕ್ಷಿಸಿರುವ  ಕುರಿತು ಉದಯವಾಣಿ “ರಾಜ್ಯೋತ್ಸವ ಪ್ರಶಸ್ತಿಗಾಗಿ ಸಮ್ಮಿಶ್ರ ಲಾಬಿ’ ಎಂಬ ಶೀರ್ಷಿಕೆ ನೀಡಿ ವಿಶೇಷ ವರದಿ ಪ್ರಕಟಿಸಿತ್ತು.

Advertisement

ಇದು ಗಮನಕ್ಕೆ ಬರುತ್ತಿದ್ದಂತೆ ಎಚ್ಚೆತ್ತ ಇಲಾಖೆ ಅಧಿಕಾರಿಗಳು ಯಕ್ಷಗಾನ ಅಕಾಡೆಮಿಯ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ರಾಜ್ಯೋತ್ಸವ ಪ್ರಶಸ್ತಿಗೆ 5 ಮಂದಿ  ಸಾಧಕರ ಹೆಸರು ಶಿಫಾರಸ್ಸು ಮಾಡುವಂತೆ ಸೂಚಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೋ ಎಂ.ಎ.ಹೆಗಡೆ ಅವರು, ಇಲಾಖೆ ಅಧಿಕಾರಿಗಳು ಪ್ರಶಸ್ತಿಗಾಗಿ ಸಾಧಕರ ಮಾಹಿತಿ ನೀಡುವಂತೆ ಹೇಳಿರುವ ಬಗ್ಗೆ ಖಚಿತಪಡಿಸಿದ್ದಾರೆ. ಅಚ್ಚರಿ ಏನೆಂದರೆ, ಈ ಬಗ್ಗೆ ಉಳಿದೆಲ್ಲಾ  ಅಕಾಡೆಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಕ್ಷಗಾನ ಅಕಾಡೆಮಿಗೆ ಮಾಹಿತಿಯನ್ನೇ ನೀಡಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next