Advertisement

ಹೊಸ ಆವಿಷ್ಕಾರಗಳಿಂದ ಕೃಷಿ ಸಮಸ್ಯೆಗೆ ಪರಿಹಾರ ಅಗತ್ಯ: ವೆಂಕಯ್ಯ ನಾಯ್ಡು 

12:28 AM Aug 17, 2021 | Team Udayavani |

ಬೆಂಗಳೂರು: ಹೊಸ ಆವಿಷ್ಕಾರಗಳ ಮೂಲಕ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದರು.

Advertisement

ಸೋಮವಾರ ಜಕ್ಕೂರು ಆವರಣದಲ್ಲಿರುವ ಜವಾಹರ್‌ಲಾಲ್‌ ನೆಹರು ಸೆಂಟರ್‌ ಫಾರ್‌ ಅಡ್ವಾನ್ಸ್‌  ಸೈಂಟಿಫಿಕ್‌ ಸಂಶೋಧನ ಕೇಂದ್ರದ ನಾವೀನ್ಯ ಮತ್ತು ಅಭಿವೃದ್ಧಿ ಕೇಂದ್ರದ ಶಿಲಾನ್ಯಾಸ ನೆರ ವೇರಿಸಿ ಅವರು ಮಾತನಾಡಿದರು. ಅವರು ಕನ್ನಡದಲ್ಲೇ ಭಾಷಣ ಆರಂಭಿಸಿ ಗಮನ ಸೆಳೆದರು.

ಪೇಟ ತೊಡಿಸಿದ ಸಿಎಂ :

ಆರು ದಿನಗಳ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ  ಸೋಮವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಳಿದ ಉಪ ರಾಷ್ಟ್ರಪತಿಯವರನ್ನು ಸಿಎಂ ಬೊಮ್ಮಾಯಿ  ಮೈಸೂರು ಪೇಟ ತೊಡಿಸಿ, ಹಾರ ಹಾಕಿ ಸ್ವಾಗತಿಸಿದರು.  ರಾಜ್ಯಪಾಲರು, ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ, ಸಂಸದ ಪಿ.ಸಿ.ಮೋಹನ್‌  ಮತ್ತಿತತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next