Advertisement
ಜಿಲ್ಲಾಧಿಕಾರಿ ಅವರ ಚೇಂಬರ್ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್ ಬಾಬು ಅಧ್ಯಕ್ಷತೆ ವಹಿಸಿದ್ದರು. ರೋಗ ಲಕ್ಷಣ ಪ್ರಕಟಿಸುವವರ ಬಗ್ಗೆ ನಿಗಾ ಇರಿಸುವ ನಿಟ್ಟಿನಲ್ಲಿ ಪಂಚಾಯತ್- ನಗರಸಭೆಗಳ ವಾರ್ಡ್ ಮಟ್ಟದಲ್ಲಿ ಸಮಿತಿಗಳನ್ನು ರಚಿಸುವಂತೆ ಜಿಲ್ಲಾಧಿ ಕಾರಿ ಆದೇಶಿಸಿದರು. ಈ ಸಮಿತಿಗಳಲ್ಲಿ ಕುಟುಂಬಶ್ರೀ ಸದಸ್ಯರನ್ನು, ಆಶಾ ಕಾರ್ಯಕರ್ತೆಯರನ್ನು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿ ಧಿಗಳನ್ನು, ಸ್ವಯಂ ಸೇವಾ ಸಂಘಟನೆಗಳ ಪ್ರತಿನಿ ಧಿ ಗಳನ್ನು ಸೇರಿಸಿಕೊಳ್ಳಬೇಕು. ಈ ಸಮಿತಿಗಳ ಏಕೀಕರಣದ ಹೊಣೆಯನ್ನು ಆಯಾ ಸ್ಥಳೀಯಾಡಳಿತೆ ಸಂಸ್ಥೆಗಳ ಕಾರ್ಯ ದರ್ಶಿಗಳಿಗಿದೆ ಎಂದವರು ತಿಳಿಸಿದರು.
ಡಾ| ಎ.ವಿ.ರಾಮದಾಸ್, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ| ಎ.ಟಿ. ಮನೋಜ್, ಜಿಲ್ಲಾ ಆಸ್ಪತ್ರೆ ವರಿಷ್ಠಾ ಧಿಕಾರಿ ಡಾ| ಕೆ.ವಿ. ಪ್ರಕಾಶ್, ಕಾಸರಗೋಡು ಜನರಲ್ ಆಸ್ಪತ್ರೆ ವರಿಷ್ಠಾ ಧಿಕಾರಿ ಡಾ| ಕೆ.ಕೆ. ರಾಜಾರಾಂ, ಜಿಲ್ಲಾ ಹೋಮಿಯೋ ಪ್ರಧಾನ ವೈದ್ಯಾಧಿಕಾರಿ ಡಾ| ಟಿ.ಕೆ. ವಿಜಯಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅ ಧಿಕಾರಿ ಡಾ| ಟಿ.ಪಿ. ಆಮಿನಾ, ಡಿ.ವೈ.ಎಸ್.ಪಿ. ಹರಿಶ್ಚಂದ್ರ ನಾಯ್ಕ, ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕಿ ಕೆ.ವಿ. ಪುಷ್ಪಾ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬೇಬಿ ಷೈಲಾ, ಜಿಲ್ಲಾ ವಾರ್ತಾ ಧಿಕಾರಿ ಮಧುಸೂದನನ್ ಎಂ., ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಆರ್.ಬೈಜು ಉಪಸ್ಥಿತರಿದ್ದರು. ಕೊಂಚ ಜಾಗರೂಕತೆಯಿದ್ದರೆ ಸಾಕು ಕೊರೋನಾ ವಿರುದ್ಧ ಪ್ರತಿರೋಧ ನಡೆಸಬಹುದು. ವಿವಿಧ ದೇಶಗಳಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರತಿರೋಧ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಸಾಬೂನು ಬಳಸಿ ಸತತ 20 ಸೆಕೆಂಡ್ಗಳ ಕಾಲ ಕೈತೊಳೆಯುವುದು ಕೊರೊನಾ ರೋಗ ಪ್ರತಿರೋಧಕ್ಕೆ ಪೂರಕವಾಗಿರುತ್ತದೆ. ಕೊರೊನಾ ಬಾಧಿ ತರ ಸಹಿತ ಮಂದಿಯಿಂದ ಸಾಕಷ್ಟು ಅಂತರ ಕಾಯ್ದಿಟ್ಟು ಕೊಳ್ಳಬೇಕು. ರೋಗ ಬಾಧೆಯಿರುವ ಸಂಶಯ ವಿದ್ದವರು ಸಾರ್ವಜನಿಕ ಸಮಾರಂಭ ಗಳಿಂದ ದೂರ ಉಳಿಯಬೇಕು. ಮನೆಗಳಲ್ಲಿ ನಿಗಾ ದಲ್ಲಿರುವವರು ಉತ್ತಮ ಬೆಳಕು, ಗಾಳಿ ಯಿರುವ ಕೋಣೆಗಳಲ್ಲಿ ವಾಸಿಸಬೇಕು. ರೋಗಿಗಳೊಂದಿಗೆ ವ್ಯವಹರಿಸುವವರು ವೈಜ್ಞಾನಿಕ ರೀತಿಯ ಪ್ರತಿರೋಧ ಮಾರ್ಗಗಳನ್ನು ಅನುಸರಿಸಬೇಕು.
Related Articles
ಶಿಕ್ಷಣಾಲಯಗಳಿಂದ ಅಧ್ಯಯನ ಪ್ರವಾಸಕ್ಕೆ ತೆರಳುವುದಕ್ಕೆ ಕಠಿನ ನಿಯಂತ್ರಣ ಹೇರಲಾಗಿದೆ. ಕೊರೊನಾ ಬಾಧೆಯಿರುವ ದೇಶಗಳಿಂದ ಜಿಲ್ಲೆಗೆ ಪ್ರವಾಸಕ್ಕೆಂದು ಆಗಮಿಸುವ ವಿದೇಶೀಯರ ಬಗ್ಗೆ ತತ್ಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಧಿಕಾರಿ ಆದೇಶ ನೀಡಿದರು. ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಪೊಲೀಸರು ತಪಾಸಣೆ ನಡೆಸುವರು. ವಿದೇಶೀಯರು ಸ್ವಯಂ ತಪಾಸಣೆಗೆ ಒಳಗಾಗಬೇಕು. ಕೆಮ್ಮು, ಸೀನು, ಜ್ವರದ ಲಕ್ಷಣಗಳಿದ್ದಲ್ಲಿ ತತ್ಕ್ಷಣ ಜಿಲ್ಲಾ ಆಸ್ಪತ್ರೆಯ ಕೊರೊನಾ ನಿಯಂತ್ರಣ ಘಟಕವನ್ನು (ದೂರ ವಾಣಿ ಸಂಖ್ಯೆ: 9946000493.) ಸಂಪರ್ಕಿ ಸಬೇಕು. ಕೊರೊನಾ ರೋಗ ಚಟುವ ಟಿಕೆಗಳ ಅಂಗವಾಗಿ ಎಲ್ಲ ಇಲಾಖೆ ಗಳೂ ಹೆಚ್ಚುವರಿ ಜಾಗರೂಕತೆ ವಹಿಸಿ ಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.
Advertisement