Advertisement

ಹೊಸ ತಾಲೂಕು ಶೀಘ್ರ ಕಾರ್ಯರೂಪಕ್ಕೆ: ಸಿಎಂ

10:44 AM Mar 19, 2017 | Team Udayavani |

ಕಲಬುರಗಿ: ಬಜೆಟ್‌ನಲ್ಲಿ ಘೋಷಿಸಲಾದ 49 ತಾಲೂಕುಗಳು ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಶನಿವಾರ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ನಡೆದ ಡಾ| ಬಿ.ಆರ್‌. ಅಂಬೇಡ್ಕರ್‌ 125ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ನೂತನ ತಾಲೂಕುಗಳಿಗೆ ಆಡಳಿತ ವ್ಯವಸ್ಥೆಯ ಅಂತಿಮ ಸ್ವರೂಪ ನೀಡಿ ಉದ್ಘಾಟನೆ ನೆರವೇರಿಸಿ ಚಾಲನೆ ನೀಡಲಾಗುವುದು ಎಂದು ಪ್ರಕಟಿಸಿದರು.

ಡಾ| ಬಿ.ಆರ್‌.ಅಂಬೇಡ್ಕರ್‌ ಅವರ 125ನೇ ಜಯಂತ್ಯುತ್ಸವವನ್ನು ವರ್ಷವಿಡೀ ಆಚರಿಸಲಾಗುತ್ತಿದೆ. ಜುಲೈನಲ್ಲಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿಜಯಂತಿ ಆಚರಿಸಲು ಉದ್ದೇಶಿಸಲಾಗಿದೆ. ಇದರಲ್ಲಿ ದೇಶ-ವಿದೇಶಗಳಿಂದ ಖ್ಯಾತ ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ 125 ವಸತಿ ಶಾಲೆಗಳನ್ನು ಅಂಬೇಡ್ಕರರ ಹೆಸರಿನಲ್ಲಿ ಪ್ರಾರಂಭಿಸಲಾಗುತ್ತಿದ್ದು,

ಬಜೆಟ್‌ನಲ್ಲಿ ಘೋಷಿಸಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಬಿ.ಆರ್‌. ಅಂಬೇಡ್ಕರ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ಸಂಸ್ಥೆ ಸ್ಥಾಪಿಸಲಾಗುತ್ತಿದೆ. ಇದರ ಅಡಿಗಲ್ಲು ನೆರವೇರಿಸಲು ರಾಷ್ಟ್ರಪತಿಯವರಲ್ಲಿ ವಿನಂತಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next