Advertisement

ಕೋವಿಡ್ ಹೊಸ ಪ್ರಭೇದ..ಎಚ್ಚರ ಅಗತ್ಯ; ರಾಜ್ಯದಲ್ಲಿ ಸದ್ಯ ಲಾಕ್ ಡೌನ್ ಇಲ್ಲ: ಸಚಿವ ಸುಧಾಕರ್

06:03 PM Dec 21, 2020 | Nagendra Trasi |

ಬೆಂಗಳೂರು: ಬ್ರಿಟನ್ ಸೇರಿದಂತೆ ಜಗತ್ತಿನ ಮೂರು ದೇಶಗಳಲ್ಲಿ ಈಗಾಗಲೇ ಕೋವಿಡ್ ನ ಹೊಸ ಪ್ರಭೇದ ಪತ್ತೆಯಾಗಿದ್ದು, ಇದು ಕ್ಷಿಪ್ರವಾಗಿ ಹರಡುತ್ತಿದ್ದು, ಈ ಬಗ್ಗೆ ಮುಂಜಾಗ್ರತೆ ಅತ್ಯಗತ್ಯ. ಅಲ್ಲದೇ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Advertisement

ಕೋವಿಡ್ ಹೊಸ ಪ್ರಭೇದದಲ್ಲಿ ಹರಡುವಿಕೆ ಗುಣ ಹೆಚ್ಚಾಗಿದ್ದು, ರಾಜ್ಯದ ಜನರು ಕೂಡಾ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದಕ್ಕೆ ಆದ್ಯತೆ ನೀಡಬೇಕು. ಈ ಬಗ್ಗೆ ನಾವು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವುದು ಮುಖ್ಯ ಎಂದು ಸೋಮವಾರ (ಡಿಸೆಂಬರ್ 21, 2020) ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ವಿವರಿಸಿದರು.

ಈಗಾಗಲೇ ಬ್ರಿಟನ್ ನಿಂದ ರಾಜ್ಯಕ್ಕೆ 530 ಮಂದಿ ಬಂದಿದ್ದು, ಇದರಲ್ಲಿ 138 ಪ್ರಯಾಣಿಕರು ಪರೀಕ್ಷೆ ಮಾಡಿಸದೇ ಆಗಮಿಸಿದ್ದು, ಅವರು ಒಂದು ವಾರ ಹೋಮ್ ಕ್ವಾರಂಟೈನ್ ಗೆ ಒಳಗಾಗಬೇಕು ಎಂದು ಹೇಳಿದರು. ಕೇಂದ್ರ ಸರ್ಕಾರದ ಆದೇಶದಂತೆ ವಿದೇಶದಿಂದ ಬಂದ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next