Advertisement
ಜಾರಕಿಹೊಳಿ ಸಹೋದರರೂ ಕೂಡ ಸಿದ್ದರಾಮಯ್ಯ ಬರುವವರೆಗೂ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಹೇಳಲಾಗುತ್ತಿದ್ದು, ಪಕ್ಷ ಹಾಗೂ ಸರ್ಕಾರದಲ್ಲಿ ತಮಗೆ ಆಗುತ್ತಿರುವ ಅನ್ಯಾಯವನ್ನು ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ಇದೇ ವೇಳೆ, ತಾವು ವಿದೇಶಕ್ಕೆ ತೆರಳಿದಾಗ ಏನೇ ಬೆಳವಣಿಗೆಯಾದರೂ ತಮ್ಮ ಮೇಲೆ ಅಪವಾದ ಬರುತ್ತದೆಂದು ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿಗೆ ಹೇಳಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಬಂದ ನಂತರ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
● ಡಾ.ಜಿ. ಪರಮೇಶ್ವರ್, ಉಪ ಮುಖ್ಯಮಂತ್ರಿ ಜಾರಕಿಹೊಳಿ ಸಹೋದರರು ಕಾಂಗ್ರೆಸ್ ತೊರೆಯುವುದಿಲ್ಲ. ಬೆಳಗಾವಿಯ ಸಣ್ಣಪುಟ್ಟ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಬಗೆ ಹರಿಸುತ್ತೇವೆ.
ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅಲ್ಲಿನ ಕೆಲವು ಶಾಸಕರೇ ಪಕ್ಷ ಬಿಡುತ್ತಾರೆ.
● ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
Related Articles
● ಎಸ್.ಆರ್. ಪಾಟೀಲ,
ಮಾಜಿ ಸಚಿವ
Advertisement