Advertisement

Karnataka: ಪತ್ರಕರ್ತರ ಮುಂದಿನ ರಾಜ್ಯ ಸಮ್ಮೇಳನ ತುಮಕೂರಿನಲ್ಲಿ

11:21 PM Feb 04, 2024 | Team Udayavani |

ದಾವಣಗೆರೆ: ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ಮುಂದಿನ ವರ್ಷ ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ನಡೆಯಲಿದೆ.

Advertisement

ನಗರದಲ್ಲಿ ರವಿವಾರ ಜರಗಿದ 38ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ನಡೆದ ಪ್ರತಿನಿಧಿಗಳ ಸಭೆಯಲ್ಲಿ ತುಮಕೂರಿನಲ್ಲಿ 39ನೇ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಸಲು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ದಾವಣಗೆರೆಯಲ್ಲಿ ನಡೆದ 38ನೇ ಸಮ್ಮೇಳನ ಈ ಹಿಂದೆ ನಡೆದ ಎಲ್ಲ ಸಮ್ಮೇಳನಕ್ಕಿಂತ ಹೆಚ್ಚು ಅದ್ದೂರಿಯಾಗಿದೆ ಎಂದು ಅಭಿನಂದನೆ ಸಲ್ಲಿಸಿದರು.

39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಸಲು ತುಮಕೂರು, ಶಿವಮೊಗ್ಗ, ರಾಯಚೂರಿನಿಂದ ಬೇಡಿಕೆ ಬಂದಿದ್ದು, ಗಡಿ ಜಿಲ್ಲೆಗಳಾದ ಕಲಬುರಗಿ, ವಿಜಯಪುರ ಮತ್ತು ಕರಾವಳಿಯಲ್ಲೂ ಸಮ್ಮೇಳನ ಮಾಡಿದ್ದೇವೆ. ಎಲ್ಲರ ಒಪ್ಪಿಗೆ ಮೇರೆಗೆ ಮುಂದಿನ ಬಾರಿ 39ನೇ ರಾಜ್ಯ ಮಟ್ಟದ ಸಮ್ಮೇಳನ ನಡೆಸಲು ತುಮ ಕೂರು ಜಿಲ್ಲೆಯಲ್ಲಿ ನಡೆಸಲು ಪ್ರತಿನಿ ಧಿಗಳ ಸಭೆ ನಿರ್ಣಯಿಸಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next