Advertisement

ಚೌಧರಿ ಮೇಲೆ ಹಲ್ಲೆ

01:06 AM Aug 09, 2019 | sudhir |

ಹೊಸದಿಲ್ಲಿ: ಸ್ಟೀಲ್‌ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್‌ (ಸೈಲ್‌) ಮುಖ್ಯಸ್ಥ ಅನಿಲ್‌ ಕುಮಾರ್‌ ಚೌಧರಿ ಮೇಲೆ ಮಾರಣಾಂತಿಕ ಹಲ್ಲೆಯಾಗಿರುವ ಘಟನೆ, ದಕ್ಷಿಣ ದಿಲ್ಲಿಯ ಹೌಜ್‌ ಖಾಸ್‌ರ ರಸ್ತೆಯೊಂದರಲ್ಲಿ ಬುಧವಾರ ನಡೆದಿದೆ. ಸಮಯಕ್ಕೆ ಸರಿಯಾಗಿ ರಾತ್ರಿ ಗಸ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ ಕಾರಣ ಅನಿಲ್‌, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ರಾತ್ರಿ, ಅನಿಲ್‌ ಕಚೇರಿಯಿಂದ ಮನೆಗೆ ಹಿಂದಿರುಗುವಾಗ, ಇಬ್ಬರು ವ್ಯಕ್ತಿಗಳು ಅವರ ಕಾರನ್ನು ಅಡ್ಡಗಟ್ಟಿ, ಅವರನ್ನು ಕಾರಿನಿಂದ ಹೊರಗೆಳೆದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ. ಪೊಲೀಸರು ಅವರನ್ನು ಬಂಧಿಸಿದಾಗ ಅವರ ಬಳಿ ಚೂರಿಗಳು ಇರುವುದು ತಿಳಿದುಬಂದಿದೆ. ತನಿಖೆ ಮುಂದುವರಿದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next