Advertisement

Shikaripur ಅಪಪ್ರಚಾರದಲ್ಲಿ ವಿಪಕ್ಷದವರು ನಿಸ್ಸೀಮರು: ವಿಜಯೇಂದ್ರ

11:13 PM Sep 18, 2023 | Team Udayavani |

ಶಿಕಾರಿಪುರ: ಅಪಪ್ರಚಾರ ಮಾಡುವುದರಲ್ಲಿ ವಿಪಕ್ಷದ ಮುಖಂಡರು ನಿಸ್ಸೀಮರಾಗಿದ್ದಾರೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದರು.

Advertisement

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ವಿಪಕ್ಷದ ಮುಖಂಡರು ವಿಧಾನಸಭೆ ಚುನಾವಣೆಗೂ ಮುನ್ನ ಹಾಗೂ ಈಗಲೂ ನಿರಂತರ ವಾಗಿ ನಮ್ಮ ವಿರುದ್ಧ ಟೀಕೆ, ಅಪಪ್ರಚಾರ ಮಾಡುತ್ತಿದ್ದಾರೆ. ವಿಜಯೇಂದ್ರ ಶಾಸಕರಾದರೆ ಶಿಕಾರಿಪುರದಲ್ಲಿ ಇರುವುದಿಲ್ಲ, ಬೆಂಗಳೂರಿನಲ್ಲಿ ಇರುತ್ತಾರೆ ಎಂದು ಹೇಳಿದ್ದರು. ಆದರೆ ತಾಲೂಕಿನ ಮತದಾರರು ನನ್ನನ್ನು ಗೆಲ್ಲಿಸಿದ್ದು, ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಆಡಳಿತ ಸೌಧದಲ್ಲಿ ಶಾಸಕರ ಕಚೇರಿ ಆರಂಭಿಸಿ ಜನರ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದೇನೆ. 130ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಜನತೆಯ ಸಮಸ್ಯೆ ಆಲಿಸಿದ್ದೇನೆ ಎಂದರು.

ಬಿ.ಎಸ್‌. ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ಅವರಿಂದ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯಾಗಿದೆ. 2019ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ತುಂಗಭದ್ರಾ ನದಿಯಿಂದ ಏತ ನೀರಾವರಿ ಮೂಲಕ ತಾಲೂಕಿನ 282 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಅನುಷ್ಠಾನಗೊಳಿಸಿದ್ದರು. ಪ್ರಸ್ತುತ ಈ ಯೋಜನೆ ಕಾಮಗಾರಿ ಪೂರ್ಣಗೊಂಡು ತಾಲೂಕಿನಲ್ಲಿ 103 ಕೆರೆಗಳನ್ನು ಸಂಪೂರ್ಣ ತುಂಬಿಸಲಾಗಿದೆ. 28 ಕೆರೆಗಳು ಶೇ. 50ರಷ್ಟು ತುಂಬಿವೆ. ವಿದ್ಯುತ್‌ ಅಭಾವ ಇರುವುದರಿಂದ ಉಳಿದ ಕೆರೆಗಳನ್ನು ತುಂಬಿಸಲು ಸಾಧ್ಯವಾಗಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next