Advertisement

Tamil Nadu ನೀರು ಬಿಡುವ ಮುನ್ನ ಸರ್ವಪಕ್ಷಗಳ ಸಲಹೆ ಕೇಳಬೇಕಿತ್ತು ಎಂದ ವಿಪಕ್ಷ

12:33 AM Aug 24, 2023 | Team Udayavani |

ಬೆಂಗಳೂರು: ತಮಿಳುನಾಡಿಗೆ ನೀರು ಬಿಟ್ಟ ಬಳಿಕ ಸರ್ವಪಕ್ಷ ಸಭೆ ಕರೆದಿದ್ದಕ್ಕೆ ವಿಪಕ್ಷಗಳು ಆಕ್ಷೇಪಿಸಿದ್ದು, ನಾಡಿನ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸಹಕರಿಸಲು ನಾವು ತಯಾರಿದ್ದರೂ, ಸಲಹೆ ಪಡೆಯಲು ಸರಕಾರ ಸಿದ್ಧವಿಲ್ಲ ಎಂದು ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಬೇಸರ ವ್ಯಕ್ತಪಡಿಸಿದರು.

Advertisement

ನಿಗದಿತ ಪ್ರಮಾಣದ ನೀರು ಬಿಟ್ಟಿಲ್ಲವೆಂದು ತಕರಾರು ತೆಗೆದಿರುವ ತಮಿಳುನಾಡು, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ ಬುಧ ವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆ ಯಲ್ಲಿ ಸರ್ವಪಕ್ಷ ಸಭೆ ಕರೆಯ ಲಾಗಿತ್ತು. ಸಭೆಯಲ್ಲಿ ತಮ್ಮ ಅಭಿಪ್ರಾಯ ಗಳನ್ನು ಮಂಡಿಸಿದ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು, ಸರಕಾರಕ್ಕೆ ಹಲವು ಸಲಹೆಗಳನ್ನು ಕೊಟ್ಟರಲ್ಲದೆ, ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಮನದಟ್ಟು ಮಾಡಿಸುವಂತೆ ಒತ್ತಿ ಹೇಳಿದರು.

ಮೊದಲ ಹಂತದಲ್ಲೇ ನೀವು
ಎಡವಿದ್ದೀರಿ; ಎಚ್ಚೆತ್ತುಕೊಳ್ಳಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯ ಸರಕಾರ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಾಂತರ ಅರ್ಜಿ ಸಲ್ಲಿಸದೆ, ರಾಜ್ಯದ ರೈತರಿಗೆ ನೀರು ಬಿಡದೇ ತಮಿಳುನಾಡಿಗೆ ಬಿಟ್ಟಿರುವುದು ಸರಿಯಲ್ಲ. ನಮ್ಮ ಆಕ್ಷೇಪವನ್ನು ಸರಕಾರ ಒಪ್ಪಲು ಸಿದ್ಧವಿಲ್ಲ. ನೆಲ, ಜಲ ವಿಚಾರದಲ್ಲಿ ನಮ್ಮ ರಾಜ್ಯದ ಹಿತರಕ್ಷಣೆ ಮಾಡುವುದರಲ್ಲಿ ನಾವು ಬೆಂಬಲ ಕೊಡುತ್ತೇವೆ. ಆದರೆ, ನೀವು ಮೊದಲ ಹಂತದಲ್ಲಿಯೇ ಎಡವಿದ್ದೀರಿ. ಸಿಡಬ್ಲ್ಯುಎಂಎನಲ್ಲಿ ಸರಿಯಾಗಿ ವಾದ ಮಾಡುವುದರಲ್ಲಿ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗದೆ ಇರುವುದರಲ್ಲಿ ಎಡವಿದ್ದೀರಿ. ತಮಿಳುನಾಡಿಗೆ 10 ಸಾವಿರ ಕ್ಯುಸೆಕ್‌ ನೀರು ಬಿಡುವ ಪರಿಸ್ಥಿತಿಯಲ್ಲಿಲ್ಲ. ನಮ್ಮ ರೈತರಿಗೆ ನೀರು ಬಿಡದೆ ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿ ಒದಗಿಸಿಕೊಂಡಿರುವುದು ಸರಿಯಲ್ಲ. ಸುಪ್ರೀಂಕೋರ್ಟ್‌ನಲ್ಲಿ ಇದರ ಬಗ್ಗೆ ಮನವರಿಕೆ ಮಾಡಿಕೊಟ್ಟು ನೀರು ಬಿಡದಂತೆ ನೋಡಿಕೊಳ್ಳುವುದು ಬಹಳ ಮುಖ್ಯ. ಎರಡು ತಿಂಗಳ ಅನಂತರ ಬೆಂಗಳೂರಿಗೂ ಸಂಕಷ್ಟವಾಗುತ್ತದೆ. ಇದನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು. ಮಹದಾಯಿ ವಿಚಾರದಲ್ಲಿ ಮೊದಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಅನಂತರ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗುವ ಬಗ್ಗೆ ಆಲೋಚಿಸಿ ಎಂದು ಸಲಹೆ ನೀಡಿದರು.

ನಾಡಿನ ವಿಚಾರದಲ್ಲಿ ಮೌನ ಇಲ್ಲ
ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ನೆಲ, ಜಲ, ಭಾಷೆ ರಕ್ಷಣೆ ಹಾಗೂ ನಮ್ಮ ನೀರಿನ ಹಕ್ಕು, ರೈತರ ಪ್ರಶ್ನೆ ಬಂದಾಗ ವಿಪಕ್ಷಗಳು ಮಾತನಾಡದೆ ಮೌನವಾಗಿರಲು ಸಾಧ್ಯವಿಲ್ಲ. ಇಂತಹ ಸೂಕ್ಷ್ಮ ವಿಚಾರಗಳಲ್ಲಿ ಸರಕಾರವನ್ನು ಪ್ರಶ್ನಿಸಿದರೆ ಅದನ್ನೇ ರಾಜಕೀಯ ಎಂದು ಭಾವಿಸುವುದು ತಪ್ಪು. ನೀರು ಹರಿಸುವ ಮೊದಲೇ ಸರ್ವಪಕ್ಷ ಸಭೆ ಕರೆದಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು. ಈಗ ನೀವು ತಮಿಳುನಾಡಿಗೆ ನೀರು ಹರಿಸುತ್ತಿದ್ದೀರಿ. ರೈತರು ಪ್ರತಿಭಟನೆ ಮಾಡುತ್ತಿ¨ªಾರೆ. ಅದಕ್ಕೆ ಈಗ ಏನು ಸಮಜಾಯಿಷಿ ನೀಡುತ್ತೀರಿ ಎಂದು ಪ್ರಶ್ನಿಸಿದರು.

ಮಹದಾಯಿ ಹೋರಾಟಗಾರರಿಂದ ಸಿಎಂ ಭೇಟಿ
ಸರ್ವಪಕ್ಷ ಸಭೆ ಮುಗಿಸಿ ಹೊರಬಂದ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಲಿಫ್ಟ್ ಬಳಿ ಮುತ್ತಿಕೊಂಡ ಮಹದಾಯಿ ಹೋರಾಟಗಾರರು, ತಮಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ರೈತ ಸಂಘಟನೆಗಳಿಂದ ಮನವಿ ಪತ್ರ ಸ್ವೀಕರಿಸಿದ ಸಿಎಂ, ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗ ಹೋಗಿ ಮನವಿ ಮಾಡುವ ಭರವಸೆ ನೀಡಿದರು.

Advertisement

ನೀರು ಬೇಕಾದರೆ ರೈತರೇ ನ್ಯಾಯಾಲಯಕ್ಕೆ ಹೋಗಲಿ ಎನ್ನುವ ಜಲ ಸಂಪನ್ಮೂಲ ಸಚಿವರ ಹೇಳಿಕೆ ಸರಿ ಅಲ್ಲ. ರೈತರೇ ನ್ಯಾಯಾಲಯಕ್ಕೆ ಹೋಗುವುದಾದರೆ ಸರಕಾರ ಏಕೆ ಬೇಕು? ಇಷ್ಟೆÇÉಾ ವ್ಯವಸ್ಥೆ ಅಗತ್ಯ ಏನಿದೆ? ಈ ಬಗ್ಗೆ ತಪ್ಪು ತಿಳಿಯುವ ಅಗತ್ಯ ಇಲ್ಲ. ಪ್ರತಿಪಕ್ಷಗಳನ್ನು ರಾಜಕೀಯ ಮಾಡಬೇಡಿ ಎಂದು ಹೇಳುತ್ತೀರಿ, ಆದರೆ ಇಂಥ ಸೂಕ್ಷ¾ ವಿಷಯಗಳಲ್ಲಿ ನಿಮ್ಮ ಜವಾಬ್ದಾರಿ ಏನಿದೆ?
– ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ

 

 

Advertisement

Udayavani is now on Telegram. Click here to join our channel and stay updated with the latest news.

Next