Advertisement

Protest: ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಪಂಚಮಸಾಲಿ ಸಮಾಜ

01:03 PM Feb 14, 2024 | Team Udayavani |

ಶಿವಮೊಗ್ಗ: ಮೀಸಲಾತಿಗೆ ಆಗ್ರಹಿಸಿ ರಾಜ್ಯ ಸರಕಾರದ ವಿರುದ್ಧ ಹೋರಾಟಕ್ಕೆ ಪಂಚಮಸಾಲಿ ಸಮಾಜ ಮುಂದಾಗಿದೆ. ಶಿವಮೊಗ್ಗದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯಲಿದೆ.

Advertisement

ಪಂಚಮಸಾಲಿ ಮಲೆಗೌಡ ಲಿಂಗಾಯತ 2A ಮೀಸಲಾತಿ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ OBC ಮೀಸಲಾತಿಗಾಗಿ ಹೋರಾಟ ಮಾಡುವುದಾಗಿ ಹೇಳಿದ್ದಾರೆ.

ಬಸವ ಸದನದಲ್ಲಿ ಇಷ್ಟಲಿಂಗ ಪೂಜೆ ಮಾಡಿ ಹೋರಾಟ ಆರಂಭ ಮಾಡಲಿರುವುದಾಗಿ ತಿಳಿಸಿದ ಸ್ವಾಮೀಜಿ ಶಿವಮೊಗ್ಗ ಶಿವಪ್ಪನಾಯಕನ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಸ್ವಾಮೀಜಿಗಳ ಹೋರಾಟದಲ್ಲಿ ಬಸವನ ಗೌಡ ಪಾಟಿಲ್ ಯತ್ನಾಳ್ ಅವರೂ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Nomination: ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

Advertisement
Advertisement

Udayavani is now on Telegram. Click here to join our channel and stay updated with the latest news.

Next