Advertisement

ಅಭ್ಯರ್ಥಿಯಲ್ಲ ಪಕ್ಷ ಮುಖ್ಯ: ಅಶೋಕ

06:36 AM Feb 18, 2019 | Team Udayavani |

ಕಲಬುರಗಿ: ಕಲಬುರಗಿ ಲೋಕಸಭೆ ಅಭ್ಯರ್ಥಿ ಯಾರು ಎನ್ನುವ ಕುರಿತು ತಲೆ ಕೆಡಿಸಿಕೊಳ್ಳಬೇಡಿ, ಇದಕ್ಕೆಲ್ಲ ಹೈಕಮಾಂಡ್‌ ತಲೆ ಕೆಡಿಸಿಕೊಳ್ಳುತ್ತದೆ. ಅಲ್ಲದೇ ಈ ಕುರಿತು ಚಿಂತನೆಯೂ ನಡೆದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌. ಅಶೋಕ ಹೇಳಿದರು.

Advertisement

ಪ್ರಧಾನಿ ನರೇಂದ್ರ ಆಗಮನ ಹಿನ್ನೆಲೆಯಲ್ಲಿ ರವಿವಾರ ಎಚ್‌ ಕೆಸಿಸಿಐ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಶಾಸಕರ, ಮುಖಂಡರ, ಪದಾಧಿಕಾರಿಗಳ ಹಾಗೂ ಅಭಿಮಾನಿಗಳ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

 ಅಭ್ಯರ್ಥಿಗಿಂತ ಪಕ್ಷ ನೋಡಿ ಹೆಚ್ಚಿನ ಜನ ಮತ ಚಲಾಯಿಸುತ್ತಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ ಆರು ಸಾವಿರ ಮತ ಪಡೆದಿದ್ದರು. ಆದರೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದಿದ್ದರೂ ಪಕ್ಷಕ್ಕೆ 20 ಸಾವಿರ ಮತಗಳು ಬಂದಿದ್ದವು. ಆದ್ದರಿಂದ ಅಭ್ಯರ್ಥಿ ಬಗ್ಗೆ ಎಲ್ಲೂ ಚಕಾರ ಎತ್ತಬೇಡಿ ಎಂದು ಕಾರ್ಯಕರ್ತರಿಗೆ ತಾಕೀತು ಮಾಡಿದರು.

ದೇಶದಲ್ಲಿ ಮತ್ತೋಮ್ಮೆ ಪ್ರಧಾನಿ ನರೇಂದ್ರ ಮೋದಿ ಎನ್ನುವ ಸಂಕಲ್ಪ ನಿಟ್ಟಿನಲ್ಲಿ ಬರುವ ಮಾರ್ಚ್‌ 1ರಂದು ಕಲಬುರಗಿ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಬೃಹತ್‌ ರ್ಯಾಲಿ ಹಮ್ಮಿಕೊಂಡಿದೆ ಎಂದು ರ್ಯಾಲಿ ಹಾಗೂ ಸಮಾವೇಶದ ಉಸ್ತುವಾರಿ ವಹಿಸಿಕೊಂಡಿರುವ ಅವರು ತಿಳಿಸಿದರು.

ರ್ಯಾಲಿ ಐತಿಹಾಸಿಕ ಎನ್ನುವಂತೆ ಯಶಸ್ವಿಯಾಗಬೇಕು. ಈ ನಿಟ್ಟಿನಲ್ಲಿ ಕಲಬುರಗಿ, ಬೀದರ್‌ ಹಾಗೂ ಯಾದಗಿರಿ ಜಿಲ್ಲೆಯ ಆಯಾ ವಿಧಾನಸಭೆ ಕ್ಷೇತ್ರದ ಸದಸ್ಯರು, ಮಾಜಿ ಶಾಸಕರು ಜತೆಗೆ ಪಕ್ಷದ ಅಧ್ಯಕ್ಷರು-ಸಂಘಟಕರು ತಮ್ಮ ಶಕ್ತಿ ಮೀರಿ ಜನತೆಯನ್ನು ಕರೆ ತರಬೇಕು ಎಂದರು.

Advertisement

ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗಿಂತ ಸಾರ್ವಜನಿಕರೇ ದೇಶದ ಭದ್ರತೆ ದೃಷ್ಟಿಯಿಂದ ಮೋದಿ ಇನ್ನೊಮ್ಮೆ ಪ್ರಧಾನಿ ಆಗಬೇಕು ಎನ್ನುತ್ತಿದ್ದಾರೆ. ಹೀಗಾಗಿ ಪಕ್ಷದವರೆಲ್ಲರೂ ಸ್ವಲ್ಪವೂ ಹಿಂದೆ ಬೀಳಬಾರದು. ಆದ್ದರಿಂದ ಇಂದಿನಿಂದ ಮಾರ್ಚ್‌ 1ರ ವರೆಗೆ ವಿಶ್ರಮಿಸದೇ ಎಲ್ಲ ಹಂತದ ಸಿದ್ಧತೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕಟಿಂಗ್ಸ್‌, ಬ್ಯಾನರ್‌, ಜಾಹೀರಾತು ಬಳಸಬೇಕೆಂದು ಸಲಹೆ ನೀಡಿದರು.

ಸಭೆಯಲ್ಲೇ ಕಲಬುರಗಿ, ಬೀದರ್‌ ಹಾಗೂ ಯಾದಗಿರಿ ಜಿಲ್ಲೆಯ ಕ್ಷೇತ್ರವಾರು ಜನರು ಮೋದಿ ರ್ಯಾಲಿಗೆ ಬರುವವರ ಸಂಖ್ಯೆಯನ್ನು ತಾಳೆ ಹಾಕಲಾಯಿತು. ಒಂದೂವರೆ ಲಕ್ಷ ಜನರು ಬರುವ ಬಗ್ಗೆ ಅಭಿಪ್ರಾಯ ವ್ಯಕ್ತವಾಯಿತು.

ಸಂಸದ ಭಗವಂತ ಖೂಬಾ, ಶಾಸಕರಾದ ರಘುನಾಥ ಮಲ್ಕಾಪುರೆ, ಬಿ.ಜಿ. ಪಾಟೀಲ, ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ್‌ ತೇಲ್ಕೂರ, ಬಸವರಾಜ ಮತ್ತಿಮಡು, ವೆಂಕಟರೆಡ್ಡಿ ಮುದ್ನಾಳ, ಪ್ರಭು ಚವ್ಹಾಣ, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸುವರ್ಣಾ ಮಲಾಜಿ, ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ, ಬಾಬುರಾವ್‌ ಚಿಂಚನಸೂರ, ಸುನೀಲ ವಲ್ಲಾಪುರೆ, ಬಾಬುರಾವ ಚವ್ಹಾಣ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಟಾಳ, ವಾಲ್ಮೀಕಿ ನಾಯಕ, ಅಮರನಾಥ ಪಾಟೀಲ್‌, ಮುಖಂಡರಾದ ಚಂದು ಪಾಟೀಲ, ಡಿ.ಕೆ. ಸಿದ್ರಾಮ, ನಾಗರತ್ನ ಕುಪ್ಪಿ, ಬೀದರ್‌ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ ಮುಂತಾದವರಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಸ್ವಾಗತಿಸಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಬಿರಾದಾರ ಕಮಲಾಪುರ ನಿರೂಪಿಸಿದರು.

ಪೂರ್ವಭಾವಿ ಸಭೆ ನಂತರ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ರ್ಯಾಲಿ ಆಯೋಜಿಸುವ ಸ್ಥಳವನ್ನು ಅದರಲ್ಲೂ ಪ್ರಮುಖವಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪರೇಡ್‌ ಮೈದಾನದ ಸ್ಥಳವನ್ನು ಆರ್‌. ಅಶೋಕ ವೀಕ್ಷಿಸಿದರು. ಪೊಲೀಸ್‌ ಪರೇಡ್‌ ಮೈದಾನವೇ ಅತ್ಯಂತ ಸುರಕ್ಷತೆ ಹಾಗೂ ಸೂಕ್ತವಾಗಿದೆ ಎಂದು ಒಮ್ಮತಕ್ಕೆ ಬರಲಾಯಿತು

Advertisement

Udayavani is now on Telegram. Click here to join our channel and stay updated with the latest news.

Next