Advertisement

ಅಪವಿತ್ರ ಮೈತ್ರಿಗೆ ಜನರೇ ಉತ್ತರ ನೀಡಿದ್ದಾರೆ: ಬಿಎಸ್‌ವೈ

01:43 AM May 24, 2019 | Team Udayavani |

ಬೆಂಗಳೂರು: ಮೈತ್ರಿ ಸರ್ಕಾರದ ವರ್ಗಾವಣೆ ದಂಧೆ ಹಾಗೂ ಭ್ರಷ್ಟ ಆಡಳಿತಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಗೆಲುವಿನ ಸಂಭ್ರಮಾಚರಿಸಿದ ನಂತರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌.ಮುನಿಯಪ್ಪ ಸೇರಿದಂತೆ ಮೈತ್ರಿ ಪಕ್ಷದ ಅತಿರಥ ಮಹಾರಥರು ಸೋಲು ಅನುಭವಿಸಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯ 25 ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಹೆಚ್ಚಿನ ಶಕ್ತಿ ನೀಡಿರುವ ರಾಜ್ಯದ 6.50 ಕೋಟಿ ಜನತೆಗೆ ತಲೆಬಾಗಿ ನಮಿಸುತ್ತೇನೆ. ರಾಜ್ಯದಲ್ಲಿ ಶೇ.84ರಷ್ಟು ಓಟು ಪಡೆಯುವ ಮೂಲಕ ಅತ್ಯಂತ ದೊಡ್ಡ ಸಾಧನೆ ಮಾಡಿದ್ದೇವೆ.

ಅಪವಿತ್ರ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌-ಜೆಡಿಎಸ್‌ನವರು ಮುಂದೇನು ಮಾಡುತ್ತೇವೆ ಎನ್ನುವುದನ್ನು ರಾಜ್ಯದ ಜನತೆಯ ಮುಂದೆ ಸ್ಪಷ್ಟಪಡಿಸಬೇಕು. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಯವರು ಏನು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ಕಾಯುತ್ತಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next