Advertisement

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಸುಲಿಗೆಕೋರರು

08:00 AM Oct 31, 2017 | Team Udayavani |

ಬೆಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಗರದ ಜಾಲಹಳ್ಳಿಯ ಬಿಇಎಲ್‌ ವೃತ್ತದ ಬಳಿ ಸೋಮವಾರ ತಡರಾತ್ರಿ ನಡೆದಿದೆ.

Advertisement

ಬೈಕ್‌ನಲ್ಲಿ ಬಂದಿದ್ದ ನಾಲ್ಲರು ಸಲಿಗೆಕೋರರು ರಸ್ತೆ ಬದಿ ಕ್ಯಾಬ್‌ ನಿಲ್ಲಸಿ ಮಲಗಿದ್ದ ಇಬ್ಬರು ಚಾಲಕರನ್ನು ಸುಲಿಗೆ ಮಾಡಿದ್ದಾರೆ. ಲಾಂಗ್‌, ಚಾಕು ತೊರಿಸಿ ಅವರ ಪರ್ಸ್‌, ಮೊಬೈಲ್‌, ಹಣವನ್ನು ದೋಚಿದ್ದರು.  ಕೂಡಲೇ ಕ್ಯಾಬ್‌ ಚಾಲಕರು ಜಾಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಮಾಹಿತಿ ನೀಡಿದ್ದರು. 

ವಿಷಯ ತಿಳಿದು ಅಲ್ಲಿಯೇ ಹೊಯ್ಸಳ ಗಾಡಿಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಸುಲಿಗೆಕೋರರನ್ನು ಹಿಡಿಯಲೆತ್ನಿಸಿದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಿಡಿಯಲೆತ್ನಿಸಿದ ಪೊಲೀಸರ ಮೇಲೆ  ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಹನುಮಂತಪ್ಪ ರಾಜು ಎಂಬ ಹೋಮ್‌ಗಾರ್ಡ್‌ಗೆ  ಲಾಂಗ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಳು ಹೋಮ್‌ಗಾರ್ಡ್‌ನ್ನು  ಮಲ್ಲೇಶ್ವರಂನ ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಜಾಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next