Advertisement

ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

07:10 AM Feb 02, 2019 | Team Udayavani |

ಹುಣಸೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ತಾಲೂಕಿನ ಹನಗೋಡು ಹೋಬಳಿ ಬೀರತಮ್ಮನಹಳ್ಳಿ ಹಾಡಿಯ ನಿವಾಸಿ ಸದ್ದಾಂ ಹುಸೇನ್‌ ಬಂಧಿತ.

Advertisement

ಈತನಿಂದ 2.4 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಚೀಲದಲ್ಲಿ ಗಾಂಜಾ ಇಟ್ಟುಕೊಂಡು ವಿರಾಜಪೇಟೆ ರಸ್ತೆಯ ಕರ್ಣಕುಪ್ಪೆ ಬಸ್‌ ನಿಲ್ದಾಣದಲ್ಲಿ ಬಸ್‌ಗೆ ಕಾಯುತ್ತಿದ್ದ ವೇಳೆ, ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಭಾಸ್ಕರ್‌ ರೈ ಹಾಗೂ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಅಪರಾಧ ವಿಭಾಗದ ಎಸ್‌ಐ ಎಂ.ಎ.ರಾಜಪ್ಪ ಮತ್ತು ತಂಡ ಸ್ಥಳಕ್ಕೆ ಧಾವಿಸಿ ಜಾಗ ಇರಿಸಿಕೊಂಡಿದ್ದ ಎರಡು ಚೀಲ ವಶಕ್ಕೆ ಪಡೆದು ಆರೋಪಿ ಬಂಧಿಸಿದ್ದಾರೆ.

ಈ ಹಿಂದೆ ಪಿರಿಯಾಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿ ಬಿಡುಗಡೆ ಹೊಂದಿ ಮತ್ತೆ ಹಳೇ ಚಾಳಿ ಮುಂದುವರಿಸಿದ್ದ. ದಾಳಿ ವೇಳೆ ಪೊಲೀಸ್‌ ಸಿಬ್ಬಂದಿ ಮೇರಾಜ್‌, ಹಿದಾಯತ್‌, ರವಿ, ಮಂಜುನಾಥ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next