Advertisement

Koudadi: ಹುಲ್ಲು ತರಲು ಹೋದವರು ಶವವಾಗಿ ಪತ್ತೆ

08:22 PM Aug 08, 2024 | Team Udayavani |

ಪುಂಜಾಲಕಟ್ಟೆ: ಹುಲ್ಲು ತರಲು ತೋಟಕ್ಕೆ ಹೋದವರು ನೀರು ಹರಿಯುವ ತೋಡಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಗುರುವಾರ(ಆ.7) ಸಂಭವಿಸಿದೆ.

Advertisement

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೌಡಾಡಿ ನಿವಾಸಿ ವಿಶ್ವನಾಥ ಶೆಟ್ಟಿ(60) ಮೃತಪಟ್ಟವರಾಗಿದ್ದಾರೆ. ಗುರುವಾರ ಮಧ್ಯಾಹ್ನ ಹುಲ್ಲು ತರಲು ತೋಟಕ್ಕೆ ಹೋದವರು ತುಂಬ ಹೊತ್ತಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಗಾಬರಿಯಾದ ಮನೆಮಂದಿ, ತೋಟಕ್ಕೆ ಹೋಗಿ ಹುಡುಕಿದಾಗ ಅಲ್ಲಿ ನೀರು ಹರಿಯುವ ತೋಡಿನಲ್ಲಿ ಇವರು ಬಿದ್ದಿರುವುದು ಕಂಡು ಬಂದಿದೆ. ತತ್‌ಕ್ಷಣ ಅವರನ್ನು ಮೇಲಕ್ಕೆತ್ತಿ ವಾಮದಪದವು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದನ್ನು ದೃಢಪಡಿಸಿದರು.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next