Advertisement
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ಪಂಡಿತ ಜವಹರಲಾಲ್ ನೆಹರು ಅವರ 129ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ ನಾಡಿದರು.
Related Articles
Advertisement
ಸಿಬಿಐ, ಇಡಿ ದುರ್ಬಳಕೆ: ಮೋದಿ ಆಡಳಿತದಲ್ಲಿ ಸಂವಿಧಾನಾತ್ಮಕ ಸಂಸ್ಥೆಗಳಾದ ಸಿಬಿಐ, ಇಡಿ, ಐ.ಬಿ. ಗಳನ್ನು ದುರುಯೋಗ ಪಡಿಸಿಕೊಂಡು ವಿರೋಧ ಪಕ್ಷಗಳನ್ನು ಹಣಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆಪಾದಿಸಿದರು.
ನೋಟು ಅಮಾನ್ಯದಿಂದ ಜನಸಾಮಾನ್ಯರಿಗೆ ಉಂಟಾಗಿರುವ ತೊಂದರೆ ಇದುವರೆಗೂ ನಿವಾರಣೆಯಾಗಿಲ್ಲ. ಕಪ್ಪು ಹಣ ಮತ್ತು ಭಯೋತ್ಪಾಧನೆಯಂತಹ ಕೃತ್ಯಗಳಿಗೆ ಸರಕಾರ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ. ಇದುವರೆಗೂ ಎಷ್ಟು ಕಪ್ಪು ಹಣ ಬಂದಿದೆ ಎಂದು ದೇಶದ ಜನರಿಗೆ ಲೆಕ್ಕ ನೀಡಿಲ್ಲ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡೇ ಜನರು ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರಕ್ಕೆ ಮತ ನೀಡಿದ್ದಾರೆ ಎಂದರು ನುಡಿದರು.
ಸಮಸ್ಯೆ ಪರಿಹರಿಸುವಲ್ಲಿ ವಿಫಲ: ಕಳೆದ ನಾಲ್ಕೂವರೆ ವರ್ಷದಲ್ಲಿ ರೈತರ ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ರಾಜ್ಯ ಸರಕಾರ ಹಲವು ಯೋಜನೆಗಳ ಮೂಲಕ ಆತ್ಮಹತ್ಯೆ ಮಾಡಿಕೊಂಡ ರೈತರ ನೆರವಿಗೆ ಬಂದಿದೆ. ಆದರೆ ಕೇಂದ್ರ ಸರಕಾರ ಒಂದು ನೈಯಾ ಪೈಸ ಪರಿಹಾರ ನೀಡಿಲ್ಲ. ದಲಿತರ ಕಗ್ಗೊಲೆ, ಮಹಿಳೆಯರ ಮೇಲಿನ ಅತ್ಯಾಚಾರ ನಿರಂತರವಾಗಿ ನಡೆಯುತ್ತಿದೆ. ಇವುಗಳಿಗೆ ಕಡಿವಾಣ ಹಾಕುವಲ್ಲಿ ಕೇಂದ್ರದ ಬಿಜೆಪಿ ವಿಫಲವಾಗಿದೆ. ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡು 2019ರ ಲೋಕಸಭಾಚುನಾವಣೆಯನ್ನು ಎದುರಿಸಬೇಕಿದೆ ಎಂದರು. ಮುದ್ದಹನುಮೇಗೌಡರೇ ಮೈತ್ರಿ ಸರಕಾರದ ಅಭ್ಯರ್ಥಿಯಾಗುವ ನಿರೀಕ್ಷೆಯಿದೆ.ಹಾಗಾಗಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದು, ರಾಹುಲ್ಗಾಂಧಿ ಅವರನ್ನು ಪ್ರಧಾನಿ ಮಾಡಲು ಮುಂದಾಗಬೇಕಿದೆ ಎಂದರು. ನೆಹರು ಕೊಡುಗೆ ಅಪಾರ: ಮಾಜಿ ಶಾಸಕ ಡಾ.ರಫಿಕ್ ಅಹಮದ್ ಮಾತನಾಡಿ, 1912ರಲ್ಲಿ ಭಾರತೀಯ ನ್ಯಾಷನಲ್ ಕಾಂಗ್ರೆಸ್ಗೆ ಸೇರ್ಪಡೆ ಗೊಂಡ ನೆಹರು ಮಹಾತ್ಮಗಾಂಧಿ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಹೆಗಲಿಗೆ ಹೆಗಲು ಕೊಟ್ಟು ದುಡಿದರು. ಸ್ವಾತಂತ್ರ್ಯ ನಂತರದ ಭಾರತದ ಮೊದಲ ಪ್ರಧಾನಿಯಾಗಿ, ದೇಶ ಆರ್ಥಿಕವಾಗಿ, ಸಾಮಾ ಜಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮುಂದೆ ಬರಲು ನೆಹರು ಕಾರಣ. ಅವರು ಜಾರಿಗೆ ತಂದ ಪಂಚಶೀಲ ತತ್ವಗಳು ಇಂದಿಗೂ ವಿದೇಶಾಂಗ ನೀತಿಯಲ್ಲಿ ಬಹಳ ಪ್ರಮುಖ ಪಾತ್ರ ವಹಿಸಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಶಾಸಕ ಎಸ್.ಷಪಿ ಅಹಮದ್,ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ, ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆಟೋರಾಜು, ಮೆಹಬೂಬ್ ಪಾಷ, ಮುಖಂಡರಾದ ಅಪ್ತಾಬ್ ಅಹಮದ್, ನರಸೀಯಪ್ಪ, ಲಿಂಗರಾಜು, ಟಿ.ಬಿ.ಮಲ್ಲೇಶ್, ಮಹಿಳಾ ಘಟಕದ ಇಂದಿರಾ ದೇನಾನಾಯಕ್, ಗೀತಮ್ಮ, ಪಾಲಿಕೆ ಸದಸ್ಯರಾದ ಮಹೇಶ್, ಕುಮಾರ್, ಇನಾಯತ್ ಭಾಗವಹಿಸಿದ್ದರು.