Advertisement

ಮೈತ್ರಿ ಸರಕಾರದಲ್ಲಿನ ಸ್ಥಿತಿಗೆ ಸಿಎಂ ಮಾತೇ ಸಾಕ್ಷಿ

12:50 AM Jan 11, 2019 | |

ಶಿವಮೊಗ್ಗ: ಮುಖ್ಯಮಂತ್ರಿಯವರಿಗೇ ಉಸಿರು ಕಟ್ಟಿಸುವ ವಾತಾವರಣ ಇದೆ ಎಂದಾದರೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ
ಸರ್ಕಾರದ ಸ್ಥಿತಿ ಹೇಗಿದೆ ಎಂಬುದು ಗೊತ್ತಾದಂತಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಕುಮಾರಸ್ವಾಮಿಯವರ “ನಾನು ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿರುವೆ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದರು.

“ಶಾಸಕಾಂಗ ಸಭೆಯಲ್ಲಿ ಕುಮಾರಸ್ವಾಮಿಯವರು ನೋವಿನಿಂದ ಮಾತನಾಡಿದ್ದಾರೆ. ನನಗೆ ಯಾವುದೇ ಸ್ವಾತಂತ್ರ್ಯವಿಲ್ಲ. ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿದ್ದೇನೆ, ನಾನು ಇಕ್ಕಟ್ಟಿನಲ್ಲಿದ್ದೇನೆ. ಯಾರೂ ನನ್ನ ಮಾತು ಕೇಳುತ್ತಿಲ್ಲ’ ಎಂದೆಲ್ಲ ಹೇಳಿದ್ದಾರೆ.

ಮುಖ್ಯಮಂತ್ರಿಯವರೇ ಈ ರೀತಿ ಹೇಳಿರುವುದು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಕೂಟದಲ್ಲಿ ಯಾವ ರೀತಿಯ ವಾತಾವರಣ
ಇದೆ ಎಂಬುದನ್ನು ಬಿಂಬಿಸುತ್ತದೆ. ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಇದರಿಂದ ಗೊತ್ತಾಗುತ್ತದೆ. ಅಧಿಕಾರಿಗಳು ಮಾತು ಕೇಳುತ್ತಿಲ್ಲ ಎಂದು ಸಿಎಂ ಹೇಳಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಹೇಗೆ ನಡೆಯುತ್ತಿದೆ ಎಂಬುದು ರಾಜ್ಯದ ಜನರಿಗೆ ಗೊತ್ತಿತ್ತು. ಈಗ ಸ್ವತ: ಮುಖ್ಯಮಂತ್ರಿಗಳೇ ಸರಕಾರದ ಸ್ಥಿತಿಯನ್ನು ಹೇಳಿದಂತಾಗಿದೆ. ಹೀಗಾಗಿ, ರಾಜ್ಯದ ಜನರೇ ಈ ಬಗ್ಗೆ ತೀರ್ಮಾನಿಸಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next