Advertisement

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ: ಸಚಿವ ಡಾ.ಮಹದೇವಪ್ಪ

06:01 PM Oct 30, 2023 | keerthan |

ವಿಜಯಪುರ: ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಸಮರ್ಥವಾಗಿ ಸರ್ಕಾರವನ್ನು ನಡೆಸುತ್ತಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಕೆಲಸಕ್ಕೆ ಬಾರದವರ ಹೇಳಿಕೆಗೆ ಆದ್ಯತೆ ನೀಡಬೇಕಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ.

Advertisement

ಸೋಮವಾರ ಜಿಲ್ಲೆಯ ಇಂಡಿ ತಾಲೂಕಿನ ಹಳಗಣಕಿ ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬಣಗಳ ಮಧ್ಯೆ ವಾಕ್ಸಮರ ಏರ್ಪಟ್ಟಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಮಹದೇವಪ್ಪ, ನಮ್ಮ ಪಕ್ಷದಲ್ಲಿ ಯಾವ ಬಣಗಳೂ ಇಲ್ಲ, ಇರುವುದೊಂದೇ ಕಾಂಗ್ರೆಸ್ ಬಣ. ಮುಖ್ಯಮಂತ್ರಿ ಬದಲಾವಣೆ ಎಂದೆಲ್ಲ ಕೆಲಸಕ್ಕೆ ಬಾರದವರು ಚರ್ಚೆ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ ಬಣದ ಹೇಳಿಕೆಗೆ ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next