Advertisement

ರಾಷ್ಟ್ರಪತಿ ಜಾತಿ ಹೆಸರೆತ್ತಿ ಗೆಹಲೋಟ್ ವಿವಾದ

04:51 AM Apr 18, 2019 | mahesh |

ದಲಿತರ ಮತ ಸೆಳೆಯಲೆಂದೇ ಬಿಜೆಪಿ ರಾಷ್ಟ್ರಪತಿ ಸ್ಥಾನಕ್ಕೆ ಎಲ್‌.ಕೆ. ಅಡ್ವಾಣಿ ಬದಲಿಗೆ ರಾಮನಾಥ್‌ ಕೋವಿಂದ್‌ರನ್ನು ಆಯ್ಕೆ ಮಾಡಿತು ಎಂದು ಹೇಳುವ ಮೂಲಕ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋಟ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. 2017ರ ಗುಜರಾತ್‌ ಅಸೆಂಬ್ಲಿ ಚುನಾವಣೆಯನ್ನು ಗಮನದಲ್ಲಿ ಟ್ಟು ಕೊಂಡು ಕೋವಿಂದ್‌ರನ್ನು ರಾಷ್ಟ್ರಪತಿ ಹುದ್ದೆಯಲ್ಲಿ ಕೂರಿಸಲಾಯಿತು ಎಂದೂ ಅವರು ಹೇಳಿದ್ದಾರೆ. ಗೆಹಲೋಟ್ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಕೂಡಲೇ ಅವರು ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ. ಜತೆಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೂ ಮನವಿ ಮಾಡಿದೆ. ತಮ್ಮ ಹೇಳಿಕೆ ವಿವಾದ ಸೃಷ್ಟಿಸುತ್ತಿದ್ದಂತೆ ಸ್ಪಷ್ಟೀಕರಣ ನೀಡಿದ ಗೆಹಲೋಟ್, ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನನಗೆ ರಾಷ್ಟ್ರಪತಿಯವರ ಮೇಲೆ ಅತ್ಯಂತ ಗೌರವವಿದೆ ಎಂದು ಹೇಳುವ ಮೂಲಕ ವಿವಾದ ತಣ್ಣಗಾಗಿಸುವ ಯತ್ನ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next