Advertisement

ಆತ್ಮಹತ್ಯೆಗೆ ಯತ್ನಿಸಿದ ಕೈದಿ

10:12 AM Aug 24, 2018 | |

ಬೆಂಗಳೂರು: ವಿಚಾರಣಾಧೀನ ಕೈದಿಯೊಬ್ಬ ಸೊಂಟದಲ್ಲಿದ್ದ ಉಡುದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಶರತ್‌ ಆತ್ಮಹತ್ಯೆಗೆ ಯತ್ನಿಸಿದ ವಿಚಾರಣಾಧೀನ ಕೈದಿ. ಪ್ರಾಣಾಪಾಯದಿಂದ ಪಾರಾಗಿರುವ ಶರತ್‌ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಹೇಳಿದರು. ಆ.21 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ವಿಚಾರಣಾಧೀನ ಕೈದಿ ಶರತ್‌ ತನ್ನ ಬ್ಯಾರಕ್‌ನಲ್ಲಿ ಯಾರೂ ಇಲ್ಲದಾಗ ಉಡುದಾರಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದೇ ವೇಳೆ ಗಸ್ತು ತಿರುಗುತ್ತಿದ್ದ ಕಾರಾಗೃಹ ಸಿಬ್ಬಂದಿ ನಿಜಲಿಂಗಪ್ಪ ಅಂಬಿಗೇರ್‌ ಹಾಗೂ ಇತರೆ ಸಿಬ್ಬಂದಿ ಕೂಡಲೇ ಶರತ್‌ನನ್ನು ರಕ್ಷಿಸಿ ಕಾರಾಗೃಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. 

Advertisement

ಘಟನೆಗೆ ನಿಖರವಾದ ಕಾರಣ ತಿಳಿದಿಲ್ಲ. ಶರತ್‌ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಂಡ ಬಳಿಕ ವಿಚಾರಣೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾರಾಗೃಹ ಮುಖ್ಯಅಧೀಕ್ಷಕ ಸೋಮಶೇಖರ್‌ ಶರತ್‌ ವಿರುದ್ಧ ಕಾರಾಗೃಹ ನಿಯಮ ಉಲ್ಲಂಘಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next