Advertisement

Unemployment: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇಳಿಕೆ: ಕೇಂದ್ರ ಸಚಿವ ನಾರಾಯಣ ರಾಣೆ

11:31 PM Oct 28, 2023 | Team Udayavani |

ಬೆಂಗಳೂರು: ಕೇಂದ್ರ ಸರಕಾರದ ವಿವಿಧ ಯೋಜನೆಗಳಿಂದಾಗಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಇಳಿಕೆಯಾಗಿದೆ ಎಂದು ಕೇಂದ್ರ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ನಾರಾಯಣ ರಾಣೆ ತಿಳಿಸಿದ್ದಾರೆ.

Advertisement

ನೈಋತ್ಯ ರೈಲ್ವೆ ವಿಭಾಗವು ಕೆ.ಜಿ.ರಸ್ತೆಯ ಎಸ್‌.ಎಂ.ವಿ.ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ರೋಜ್‌ಗಾರ್‌ ಮೇಳದಲ್ಲಿ ಹೊಸದಾಗಿ ನೇಮಕಗೊಂಡ 250 ಮಂದಿಗೆ ನೇಮಕಾತಿ ಆದೇಶ ನೀಡಿ ಮಾತನಾಡಿದರು.

ದೇಶದಲ್ಲಿ ನಿರುದ್ಯೋಗ ಹೋಗಲಾಡಿಸಲು ಸರಕಾರವು ಹಲವು ಯೋಜನೆಗಳನ್ನು ಹಮ್ಮಿಕೊಂಡ ಪರಿಣಾಮ ನಿರುದ್ಯೋಗದ ಪ್ರಮಾಣ ಇಳಿಕೆಯಾಗಿದೆ. ಮೇಳದ ಮೂಲಕ ಯುವ ಪೀಳಿಗೆಯನ್ನು ಸದೃಢರನ್ನಾಗಿಸಲು ಕೇಂದ್ರ ಪಣ ತೊಟ್ಟಿದೆ ಎಂದು ತಿಳಿಸಿದರು.

2047ರಲ್ಲಿ ಭಾರತವು ಅಭಿವೃದ್ಧಿ ಹೊಂದಿರುವ ದೇಶವಾಗಿ ಹೊರ ಹೊಮ್ಮುವ ಲಕ್ಷಣ ಗೋಚರಿಸಿದೆ. ಪ್ರಧಾನಿ ಮೋದಿ 2022ರ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ರೋಜ್‌ಗಾರ್‌ ಮೇಳ ಉದ್ಘಾಟಿಸಿದ್ದರು. 10 ಲಕ್ಷಕ್ಕೂ ಹೆಚ್ಚಿನ ಮಂದಿ ಇದರ ಸದುಪಯೋಗ ಪಡೆದುಕೊಂಡಿದ್ದಾರೆಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next