Advertisement
ಕುಸಿದು ಬಿದ್ದ ಕುಕ್ಕುಜೆ-ಅಳಂಬ ಸಂಪರ್ಕ ಸೇತುವೆ ಸ್ಥಳಕ್ಕೆ ಶುಕ್ರವಾರ ಸಂಜೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ ಅವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಳೆದ ವರ್ಷ ಸೇತುವೆ ಸಂಪೂರ್ಣ ಕುಸಿದಿರುವ ವಿಚಾರ ನನ್ನ ಗಮನಕ್ಕೆ ಬಂದಿತ್ತು. ಈ ವಿಚಾರವನ್ನು ಸಚಿವ ಈಶ್ವರಪ್ಪ ಅವರ ಗಮನಕ್ಕೆ ತಂದಿದ್ದೇನೆ. ಮಳೆಗಾಲದ ಬಳಿಕ ಗ್ರಾಮ್ ಸಡಕ್ ಯೋಜನೆಯಡಿ 3 ಕೋಟಿ ರೂ. ವೆಚ್ಚದ ಸೇತುವೆ ಹಾಗೂ 2 ಕೋಟಿ ರೂ. ವೆಚ್ಚದ ಸುಸಜ್ಜಿತ ಸಂಪರ್ಕ ರಸ್ತೆ ರಚಿಸಲು ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.
ಸೇತುವೆ ಕುಸಿದಿದ್ದರಿಂದ ಅಳಂಬ ವ್ಯಾಪ್ತಿಯಲ್ಲಿ ವಾಸಿಸುವ 160 ಅಧಿಕ ಕುಟುಂಗಳು ಜನರಿಗೆ ಮಳೆಗಾಲದಲ್ಲಿ ಸಂಚರಿಸಲು ಸಾಧ್ಯವಾಗದೆ ಅತಂತ್ರವಾಗ ಲಿದೆ. ಈ ನಿಟ್ಟಿನಲ್ಲಿ ಅಗತ್ಯವಾಗಿ ತಾತ್ಕಾಲಿಕ ಮೋರಿ ಬಳಸಿ 5 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಮುಗ್ರೋಡಿ ಕನ್ಸ್ಟ್ರಕ್ಷನ್ ಅವರ ಬಳಿ ಮಾತುಕತೆ ನಡೆಸಿ ಮುಂಗಡ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದರು. ಗುತ್ತಿಗೆದಾರರಾದ ಸುಧಾಕರ್ ಶೆಟ್ಟಿ, ಎಂಜಿನಿಯರ್ ಉದಯ್ ಕುಮಾರ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾ. ಪಂ. ಸದಸ್ಯ ಉದಯ್ ಹೆಗ್ಡೆ, ಸಾಮಾಜಿಕ ಕಾರ್ಯಕರ್ತ ರಾಮಚಂದ್ರ ಭಟ್, ನಾರಾವಿ ಗ್ರಾಮ ಪಂಚಾಯತ್ ಸದಸ್ಯೆ ಪ್ರಮೀಳಾ ಭಟ್, ರವೀಶ್ ಕುತ್ಲೂರು, ರತ್ನಾಕರ್ ಸಾಲ್ಯಾನ್, ತುಂಗಪ್ಪ ಪೂಜಾರಿ ಗ್ರಾಮಸ್ಥರು ಉಪಸ್ಥಿತರಿದ್ದರು.