Advertisement

ಒಡವೆ ಬಳಿಕ ವೀರಭದ್ರಗೆ ಮೀಸೆ ಕೊಟ್ಟ ಕೆಸಿಆರ್‌

03:50 AM Feb 25, 2017 | Team Udayavani |

ವಾರಂಗಲ್‌: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಮೆಹಬುಬಾದ್‌ ಜಿಲ್ಲೆಯಲ್ಲಿರುವ ಕುರವಿ ವೀರಭದ್ರ ಸ್ವಾಮಿ ದೇಗುಲಕ್ಕೆ 60 ಸಾವಿರ ರೂ.ಮೌಲ್ಯದ ಚಿನ್ನದ ಮೀಸೆಯನ್ನು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ಶುಕ್ರವಾರ ಕುಟುಂಬ ಸದಸ್ಯರ ಸಹಿತವಾಗಿ ಆಗಮಿಸಿದ ಅವರು ದೇಗುಲಕ್ಕೆ ಕಾಣಿಕೆ ಸಲ್ಲಿಸಿದರು. ತೆಲಂಗಾಣ ಪ್ರತ್ಯೇಕ ರಾಜ್ಯವಾದರೆ ದೇವರಿಗೆ ಕಾಣಿಕೆ ಸಮರ್ಪಿಸುತ್ತೇನೆ ಎಂದು ಅವರು ಹರಕೆ ಹೇಳಿಕೊಂಡಿದ್ದರು. ಅದು ಈಡೇರಿಕೆಯಾಗಿರುವ ಹಿನ್ನೆಲೆಯಲ್ಲಿ ಅದನ್ನು ಪೂರೈಸುತ್ತಿರುವುದಾಗಿ ಹೇಳಿದ್ದಾರೆ. ಈ ಮೂಲಕ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ತಿರುಪತಿ ತಿರುಮಲ ದೇವಸ್ಥಾನಕ್ಕೆ 5 ಕೋಟಿ ರೂ.ಮೌಲ್ಯದ ಚಿನ್ನದ ಒಡವೆಗಳನ್ನು ಕಾಣಿಕೆಯನ್ನಾಗಿ ನೀಡಿದ್ದರು. ಮುಖ್ಯಮಂತ್ರಿ ರಾವ್‌ ಅವರ ಕ್ರಮವನ್ನು ಟೀಕಿಸಿರುವ ತೆಲಂಗಾಣ ಕಾಂಗ್ರೆಸ್‌ ನಾಯಕ ಮಧು ಯಾಶ್ಕಿ ಗೌಡ್‌ ಅವರು ತೆರಿಗೆದಾರರ ಹಣ ಪೋಲು ಮಾಡುತ್ತಿದ್ದಾರೆಂದು ಆರೋಪಿಸಿಧಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next