Advertisement

ಪ್ರಚೋದನಾಕಾರಿ ಹೇಳಿಕೆ: ಸಂಘ ಪರಿವಾರ ನಾಯಕಿ ವಿರುದ್ಧ ಕೇಸು

08:10 AM Sep 12, 2017 | Team Udayavani |

ಕೊಚ್ಚಿ: ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್‌ ಹತ್ಯೆಗೆ ಸಂಬಂಧಿಸಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಚೋದನಾ ಕಾರಿ ಭಾಷಣ ಮಾಡಿದ ಕೇರಳದ ಸಂಘ ಪರಿವಾರದ ನಾಯಕಿ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Advertisement

ರವಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಿಂದೂ ಐಕ್ಯವೇದಿ ಸಂಘಟನೆಯ ಅಧ್ಯಕ್ಷೆ ಕೆ.ಪಿ.ಶಶಿಕಲಾ ಅವರು, “ಕರ್ನಾಟಕದಲ್ಲಿ ಗೌರಿ ಲಂಕೇಶ್‌ಗೆ ಆದಂತೆ ನಿಮಗೂ ಆಗಬಾರದು ಎಂದಾದರೆ, ಜಾತ್ಯತೀತ ಲೇಖಕರೆಲ್ಲ ಆದಷ್ಟು ಬೇಗ ಶಿವ ದೇವಾಲಯಗಳಲ್ಲಿ ಮೃತ್ಯುಂಜಯ ಹೋಮ ಮಾಡಿಸಿಕೊಳ್ಳಿ,’ ಎಂದಿದ್ದರು. ಈ ಹಿನ್ನೆಲೆಯಲ್ಲಿ ಶಶಿಕಲಾ ವಿರುದ್ಧ ಕಾಂಗ್ರೆಸ್‌ ಶಾಸಕ ವಿ.ಡಿ.ಸತೀಶನ್‌ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಶಿಕಲಾ ಹಾಗೂ ಅದೇ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಹಿಂದೂ ಐಕ್ಯವೇದಿ ಸಂಘಟನೆಯ ಮತ್ತೂಬ್ಬ 
ನಾಯಕ ಆರ್‌.ವಿ.ಬಾಬು ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಶಿಕಲಾ ಹೇಳಿಕೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೇರಿದಂತೆ ಅನೇಕರಿಂದ ಖಂಡನೆ ವ್ಯಕ್ತವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next