Advertisement
ನಗರದ ಚೆಲುವಾಂಬ ಪಾರ್ಕ್ಬಳಿ ಪೊಲೀಸ್ ಪೇದೆ ತನ್ನ ದ್ವಿಚಕ್ರ ವಾಹನದಲ್ಲಿ ಕಳಪೆ ಹೆಲ್ಮೆಟ್ ಇಟ್ಟಿರುವುದನ್ನು ಗಮನಿಸಿದ ಸಾರ್ವಜನಿಕರು, ಪೊಲೀಸರಿಗೊಂದು ನ್ಯಾಯ, ನಮಗೊಂದು ನ್ಯಾಯವೇ ಎಂದು ಪೇದೆಯೊಂದಿಗೆ ಮಾತಿನ ಚಕಮಕಿ ನಡೆಸಿ, ಹೆಲ್ಮೆಟನ್ನು ಒಡೆದು ಹಾಕಿದ್ದಾರೆ.
Related Articles
ಮೈಸೂರು: ಗುಣಮಟ್ಟದ ಹೆಲ್ಮೆಟ್ ಖರೀದಿಸಲು ಎರಡು ದಿನಗಳ ಕಾಲಾವಕಾಶ ನೀಡಿರುವ ಪೊಲೀಸರು, ಜನವರಿ 6ರಿಂದ ಆಪರೇಷನ್ ಸೇಫ್ ರೈಡ್ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸುವುದಾಗಿ ತಿಳಿಸಿದ್ದಾರೆ. ಬಿಐಎಸ್/ಐಎಸ್ಐ ಗುಣಮಟ್ಟದ ಹೆಲ್ಮೆಟ್ಗಳನ್ನು ಖರೀದಿಸಿ ಇನ್ನು ಮುಂದೆ ಅವುಗಳನ್ನೇ ಕಡ್ಡಾಯವಾಗಿ ಧರಿಸಲು ಜ.5ರವರೆಗೆ ಸಾರ್ವಜನಿಕರಿಗೆ ಕಾಲಾವಕಾಶ ನೀಡಲಾಗಿದೆ.
Advertisement
ಆಪರೇಷನ್ ಸೇಫ್ ರೈಡ್ ಆರಂಭವಾದ ಮೇಲೆ ಸಾರ್ವಜನಿಕರು ಬಿಐಎಸ್/ಐಎಸ್ಐ ಗುಣಮಟ್ಟದ ಹೆಲ್ಮೆಟ್ಗಳನ್ನು ಹೆಚ್ಚಾಗಿ ಖರೀದಿಸಲು ಅರಂಭಿಸಿರುವ ಹಿನ್ನಲೆಯಲ್ಲಿ ಕೆಲವು ವರ್ತಕರು ಹೆಲ್ಮೆಟ್ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆಂದು ದೂರುಗಳು ಕೇಳಿಬರುತ್ತಿದ್ದು, ಈ ರೀತಿ ಕಂಡು ಬಂದಲ್ಲಿ ಸಾರ್ವಜನಿಕರು ಇದರ ಬಗ್ಗೆ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡುವುದು.
ಕಳಪೆ ಗುಣಮಟ್ಟದ ಹೆಲ್ಮೆಟ್ಗಳನ್ನು ಮಾರಾಟ ಮಾಡುವವರ ವಿರುದ್ಧ ಈಗಾಗಲೇ ಕ್ರಮಕೈಗೊಂಡು ಅಂತಹ ಹೆಲ್ಮೆಟ್ಗಳನ್ನು ಜಪ್ತಿ ಮಾಡಿಕೊಳ್ಳಲಾಗುತ್ತಿದೆ. ಇಂತಹ ಹೆಲ್ಮೆಟ್ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಗಳು ಇದ್ದಲ್ಲಿ ಅಂತಹ ಮಾಹಿತಿಯನ್ನು ಸಾರ್ವಜನಿಕರು ಪೊಲೀಸರಿಗೆ ನೀಡುವುದು.
ಆಪರೇಷನ್ ಸೇಫ್ ರೈಡ್ ಕಾರ್ಯಾಚರಣೆಯು ಸಂಪೂರ್ಣವಾಗಿ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ನಡೆಯುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ನಗರ ಪೊಲೀಸ್ ಆಯುಕ್ತ ಡಾ.ಎ. ಸುಬ್ರಹ್ಮಣ್ಯೇಶ್ವರ ರಾವ್ ಕೋರಿದ್ದಾರೆ.