Advertisement

ರಾಜ್ಯಸಭೆ ಸ್ಥಾನಕ್ಕೆ ಲಾಬಿ ನಡೆಸಿಲ್ಲ

07:12 AM Jun 06, 2020 | Lakshmi GovindaRaj |

ಹುಬ್ಬಳ್ಳಿ: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಯಾವುದೇ ಲಾಬಿ ಮಾಡುವುದಿಲ್ಲ. ನಾನು ಬಿಜೆಪಿ ನಿಷ್ಠಾವಂತ ಕಾರ್ಯಕರ್ತ. ಪಕ್ಷದ ಮುಖಂಡರ ಆದೇಶ ಪಾಲನೆ ಮಾಡುತ್ತೆನೆಂದು ಮಾಜಿ ಸಂಸದ ಹಾಗೂ ವಿಆರ್‌ಎಲ್‌ ಸಮೂಹ ಸಂಸ್ಥೆ  ಚೇರ್ಮನ್ ನ್‌ ಡಾ. ವಿಜಯ ಸಂಕೇಶ್ವರ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿಮಾತನಾಡಿ, ರಾಜ್ಯಸಭೆ ಸದಸ್ಯ ಸ್ಥಾನಕ್ಕಾಗಿ ನಾನು ಯಾರೊಂದಿಗೂ ಚರ್ಚಿಸಿಲ್ಲ. ಯಾವುದೇ ಮುಖಂಡರು ಕೂಡ ನನ್ನನ್ನು ಸಂಪರ್ಕ ಮಾಡಿಲ್ಲ ಎಂದರು.  ಜೀವನಪೂರ್ತಿ ಸರ್ಕಾರದಿಂದ ವಿಧಾನ ಪರಿಷತ್‌ ಸದಸ್ಯ ಹಾಗೂ ಸಂಸದ ಪಿಂಚಣಿಯನ್ನು ಪಡೆಯದಿರಲು ನಿರ್ಧರಿಸಿದ್ದೇನೆ. ಎರಡೂ ಪಿಂಚಣಿಗಳನ್ನು ನೀಡದಿರುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ.

ದೇಶದ ಆರ್ಥಿಕ ಸ್ಥಿತಿ  ಸುಧಾರಣೆಗಾಗಿ ಆಮದು ಪ್ರಮಾಣ ಕಡಿಮೆಯಾಗಬೇಕು. ಸ್ವದೇಶಿ ವಸ್ತುಗಳ ಖರೀದಿ ಹೆಚ್ಚಬೇಕು. ಲಾಕ್‌ ಡೌನ್‌ನಿಂದಾಗಿ ಸಾರಿಗೆ ಉದ್ಯಮ ಕುಸಿತ ಕಂಡಿದೆ. ಅದು ಚೇತರಿಸಿಕೊಳ್ಳಲು ಕನಿಷ್ಠ 1 ವರ್ಷವಾದರೂ ಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next