Advertisement

ಪಶ್ಚಿಮ ಬಂಗಾಲದಲ್ಲಿ ರಾಮ ಮಂತ್ರ ಜಪಿಸಿ ಮ್ಯಾಜಿಕ್‌ ಮಾಡಿದ ಬಿಜೆಪಿ !

04:38 PM May 24, 2019 | Sathish malya |

ಕೋಲ್ಕತ : 2014ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದಲ್ಲಿ ಕೇವಲ 2 ಸ್ಥಾನ ಗೆದ್ದಿದ್ದ ಭಾರತೀಯ ಜನತಾ ಪಕ್ಷ ಈ ಬಾರಿಯ 2019ರ ಲೋಕಸಭಾ ಚುನವಾಣೆಯಲ್ಲಿ ರಾಮ ಮಂತ್ರ ಜಪಿಸುವ ಮೂಲಕ ಮ್ಯಾಜಿಕ್‌ ಮಾಡಿದೆ.

Advertisement

ಇಂದು ಗುರುವಾರ ಲೋಕಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿರುವಂತೆಯೇ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ 16 ಸೀಟುಗಳಲ್ಲಿ ಲೀಡ್‌ ಹೊಂದಿದ್ದು  ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌ ನೀಡಿದೆ.

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ನಡೆಸಿರುವ ಹಲವು ರೋಡ್‌ ಶೋಗಳು, ರಾಲಿಗಳ ಪರಿಣಾಮವಾಗಿ ಇಲ್ಲಿನ ಮತದಾರರು ಬಿಜೆಪಿಯತ್ತ ವಾಲಿರುವುದು ಈಗ ನಿಚ್ಚಳವಾಗುತ್ತಿದೆ.

ಪಶ್ಚಿಮ ಬಂಗಾಲದಲ್ಲಿ ಒಟ್ಟು 42 ಲೋಕಸಭಾ ಕ್ಷೇತ್ರಗಳಿವೆ. ಈ ಪೈಕಿ ಬಿಜೆಪಿ ಪ್ರಕೃತ 16 ಸೀಟುಗಳಲ್ಲಿ ಮುಂದಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ 25 ಕ್ಷೇತ್ರಗಳಲ್ಲಿ ಮುಂದಿದೆ.

ಪಶ್ಚಿಮ ಬಂಗಾಲದಲ್ಲಿ ಈ ಬಾರಿ ಕನಿಷ್ಠ 25 ಲೋಕಸಭಾ ಸೀಟುಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next