Advertisement

ನೀಲಮ್ಮ ಸಾವಿಗೆ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ: ಸಿದ್ದರಾಮಯ್ಯ ಕಿಡಿ

10:13 PM Jan 20, 2023 | Team Udayavani |

ಬೆಂಗಳೂರು : ”ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆಯ ನೀಲಮ್ಮ ಅವರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ. ಮೃತರ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತೇನೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

Advertisement

”ಕಳೆದ ಮೂರು ದಿನಗಳಿಂದ ಚಳಿ, ಬಿಸಿಲು ಎನ್ನದೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ, ಕನಿಷ್ಠ ಪಕ್ಷ ಅವರ ಸಮಸ್ಯೆಯನ್ನು ಆಲಿಸುವ ಸೌಜನ್ಯವಾದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬೇಡವೇ?” ಎಂದು ಇನ್ನೊಂದು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

”ಮಾತುಕತೆ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನೇ ಮಾಡದೆ, ಏಕಾಏಕಿ ಪ್ರತಿಭಟನಾನಿರತ ಮೇಲೆ ಬಲಪ್ರಯೋಗ ಮಾಡುವುದು, ಬಂಧಿಸುವುದು ರಾಜ್ಯ ಬಿಜೆಪಿ ಸರ್ಕಾರದ ದಾರ್ಷ್ಟ್ಯವನ್ನು ತೋರುತ್ತದೆ.”ಆರುವ ಮೊದಲು ದೀಪ ಜೋರಾಗಿ ಉರಿಯುತ್ತದೆಯಂತೆ, ಬಿಜೆಪಿ ಸರ್ಕಾರವೂ ಹಾಗೆ” ಎಂದು ಟ್ವೀಟ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next