Advertisement

ಧರ್ಮ ಒಡೆಯಲು ಹೋಗಿ ಸೋತು ಬುದ್ಧಿ ಬಂದಿದೆ: ಶೆಟ್ಟರ್‌

11:14 PM Apr 13, 2019 | Lakshmi GovindaRaju |

ಹುಬ್ಬಳ್ಳಿ: ವೀರಶೈವ ಮತ್ತು ಲಿಂಗಾಯತ ಧರ್ಮ ಒಡೆಯಲು ಹೋಗಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಪೆಟ್ಟು ತಿಂದಿದ್ದಾರೆ. ಅವರಿಗೆ ಸೋತ ಮೇಲೆ ಬುದ್ಧಿ ಬಂದಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಮಾಡಿದವರಿಗೆ ಸಮಾಜದ ಬಗ್ಗೆ ನಿಜವಾದ ಕಳಕಳಿಯಿದ್ದರೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೇಲ್ವರ್ಗದವರಿಗೆ ಮೀಸಲಾತಿ ನೀಡುವ ಕಾನೂನನ್ನು ರಾಜ್ಯದಲ್ಲಿ ಜಾರಿಗೆ ತರಲು ಪ್ರಯತ್ನಿಸಲಿ.

ಲಿಂಗಾಯತ ಧರ್ಮ ಇಬ್ಭಾಗಿಸಲು ಪ್ರಯತ್ನಿಸಿದ್ದಕ್ಕೆ ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯ ಈಗಾಗಲೇ ಕ್ಷಮೆ ಕೇಳಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯ ಈಗ ಅಪ್ರಸ್ತುತ ಎಂದು ಹೇಳುತ್ತಿದ್ದಾರೆ. ಸಚಿವ ಎಂ.ಬಿ. ಪಾಟೀಲ ಮೊದಲು ಈ ಕುರಿತು ವಿನಯ ಕುಲಕರ್ಣಿ ಅವರನ್ನು ಪ್ರಶ್ನಿಸಬೇಕು. ಆ ಮೇಲೆ ಡಿಕೆಶಿ ಅವರನ್ನು ಕೇಳಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next