Advertisement

ನಿವೃತ್ತ ಮಹಿಳಾ ತಹಸೀಲ್ದಾರ್‌ ಆತ್ಮಹತ್ಯೆ

12:32 PM Apr 02, 2018 | Team Udayavani |

ಬೆಂಗಳೂರು: ನಿವೃತ್ತ ತಹಸೀಲ್ದಾರ್‌ ಒಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವೇಶ್ವರ ನಗರದ ಕಡಂಬಿ ಶಾಲೆ ಬಳಿ ಶನಿವಾರ ರಾತ್ರಿ ಬೆಳಕಿಗೆ ಬಂದಿದೆ.

Advertisement

ನಾಗರತ್ನಮ್ಮ (63) ಆತ್ಮಹತ್ಯೆ ಮಾಡಿಕೊಂಡವರು. ಅವಿವಾಹಿತರಾಗಿದ್ದ ನಾಗರತ್ನಮ್ಮ ನಾಲ್ಕು ವರ್ಷಗಳ ಹಿಂದೆ ನಿವೃತ್ತರಾಗಿದ್ದು, ಬಸವೇಶ್ವರನಗರದಲ್ಲಿ ಒಬ್ಬರೇ ವಾಸವಾಗಿದ್ದರು. ಮನೆ ಬಳಿ ಸಂಬಂಧಿಕರ ಮನೆಗಳಿದ್ದರೂ ಯಾರೊಂದಿಗೂ ಮಾತನಾಡುತ್ತಿರಲಿಲ್ಲ ಮತ್ತು ಬೆರೆಯುತ್ತಿರಲಿಲ್ಲ ಎಂದು ಹೇಳಲಾಗಿದೆ.

ಪ್ರತಿ ನಿತ್ಯ ರಾಮಕೃಷ್ಣ ಮಂದಿರಕ್ಕೆ ಹೋಗುತ್ತಿದ್ದ ನಾಗರತ್ನಮ್ಮ ಕಳೆದ ಮೂರ್ನಾಲ್ಕು ದಿನಗಳಿಂದ ಹೊರಗೆ ಕಾಣಿಸಿಕೊಂಡಿರಲಿಲ್ಲ. ತೀರ್ಥ ಕ್ಷೇತ್ರಗಳಿಗೆ ಹೋಗಿರಬಹುದು ಎಂದು ನೆರೆಮನೆಯವರು ಭಾವಿಸಿದ್ದರು. ಆದರೆ, ಶನಿವಾರ ರಾತ್ರಿ ನಾಗರತ್ನಮ್ಮ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದುದರಿಂದ ಅನುಮಾನಗೊಂಡ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಬಾಗಿಲು ಒಡೆದು ಒಳಗೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಕೆಲ ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ವಾಸನೆ ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಬಸವೇಶ್ವರನಗರ ಠಾಣೆಯಲ್ಲಿ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next