Advertisement
ಡಾ.ಜಿ. ಪರಮೇಶ್ವರ್ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದು, ಇದೀಗ ತಾವೇ ಉದ್ಘಾಟನೆ ಮಾಡಬೇಕೆಂಬ ಅಭಿಲಾಷೆ ಹೊಂದಿದ್ದಾರೆ ಎಂದು ಹೇಳಲಾಗಿದೆ. ಅದಕ್ಕಾಗಿ ಆದಷ್ಟು ಬೇಗ ಕಟ್ಟಡ ಕಾಮಗಾರಿ ಮುಗಿಸಿ ಉದ್ಘಾಟನೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕರೆಸಲು ಯೋಜನೆಹಾಕಿಕೊಂಡಿದ್ದಾರೆ ಎಂಬ ಮಾತು ಕಾಂಗ್ರೆಸ್ ವಲಯದಿಂದಲೇ ಕೇಳಿ ಬರುತ್ತಿದೆ.
Related Articles
Advertisement
ಆದರೆ, ಪಕ್ಷದ ಆಡಳಿತ ನಡೆಸಲು ಹೊಸ ಕಚೇರಿ ನಿರ್ಮಾಣಕ್ಕೆ ಹಣಕಾಸಿನ ತೊಂದರೆ ಉಂಟಾಗಿದೆ. ಎರಡು ಕೆಳ ಮಹಡಿ ಸೇರಿದಂತೆ ಐದು ಅಂತಸ್ತಿನ ಕಟ್ಟಡವನ್ನು ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಕಟ್ಟಡ ಯೋಜನೆಗೆ ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದವರಿಂದ ತಲಾ ಐದು ಲಕ್ಷ, ಸಂಸದರಿಂದ ಐದು ಲಕ್ಷ, ಶಾಸಕರು, ವಿಧಾನ ಪರಿಷತ್ ಸದಸ್ಯರಿಂದ ತಲಾ ಒಂದು ಲಕ್ಷ ದೇಣಿಗೆ ಪಡೆಯಲಾಗಿತ್ತು. ಅಲ್ಲದೆ, ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಗೆ ಟಿಕೆಟ್ ಬಯಸಿದ್ದ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಹತ್ತರಿಂದ ಇಪ್ಪತೈದು ಸಾವಿರವರೆಗೆ ಕಟ್ಟಡ ನಿಧಿ ಹೆಸರಿನಲ್ಲಿ ಹಣ ಸಂಗ್ರಹಿಸಲಾಗಿತ್ತು.
ಆದರೆ, ಕಟ್ಟಡ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳದಿರುವು ದರಿಂದ ಯೋಜನಾ ವೆಚ್ಚ ಹೆಚ್ಚಾಗುತ್ತಿದೆ. ಅಲ್ಲದೆ, ಈಗಾಗಲೇ ನಡೆದಿರುವ ಕಾಮಗಾರಿಗೂ ಸಂಪೂರ್ಣ ಹಣ ನೀಡದಿರುವುದರಿಂದ ಸುಮಾರು 6 ರಿಂದ 7 ಕೋಟಿ ಹಣ ಬಾಕಿ ಇದೆ ಎಂದು ತಿಳಿದು ಬಂದಿದೆ. ಗುತ್ತಿಗೆದಾರರಿಗೆ ಸರಿಯಾದ ಸಮಯಕ್ಕೆ ಹಣ ಪಾವತಿಸದಿರುವುದರಿಂದ ನಿರ್ಮಾಣ ಕಾಮಗಾರಿ ಮತ್ತಷ್ಟು ವಿಳಂಬವಾಗುತ್ತಿದೆ ಎನ್ನಲಾಗಿದೆ. ನಾಯಕರ ಹಿಂದೇಟು: ವಿಧಾನಸಭೆ ಚುನಾವಣೆಗೂ ಮೊದಲು ಪಕ್ಷದ ಅಗತ್ಯಕ್ಕೆ ತಕ್ಕಂತೆ ದೇಣಿಗೆ ನೀಡಿದ್ದ ಅನೇಕ ನಾಯಕರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸರಿಯಾದ ಸ್ಥಾನಮಾನ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ದೇಣಿಗೆ ನೀಡಲು ಈಗ ಹಿಂದೇಟು
ಹಾಕಿದ್ದಾರೆ ಎನ್ನಲಾಗಿದೆ. ಪಕ್ಷದ ದೈನಂದಿನ ಕಾರ್ಯಚಟುವಟಿಕೆಗಳ ಜೊತೆಗೆ ಹೊಸ ಕಟ್ಟಡ ಕಾಮಗಾರಿಗೆ ಹಣ ಹೊಂದಿಸುವುದು ಕಷ್ಟದ ಕೆಲಸವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. – ಶಂಕರ್ ಪಾಗೋಜಿ