Advertisement
ಸನಾತನ ಸಂಸ್ಥೆ ಗೌರಿ ಹತ್ಯೆ ಪ್ರಕರಣದಲ್ಲಿಭಾಗಿಯಾಗಿರುವುದು ದೃಢಪಟ್ಟಿರುವುದರಿಂದ ಆ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ನಿಷೇಧಿಸುವಂತೆ ಆಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನೇತೃತ್ವದಲ್ಲಿ ಗೌರಿ ಲಂಕೇಶ್ ಟ್ರಸ್ಟ್ ಸದಸ್ಯರು ತಮ್ಮನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಉಪಮುಖ್ಯಮಂತ್ರಿಗಳು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
Related Articles
ಬರೆಯಬಾರದು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವ ಆಧಾರದ ಮೇಲೆ ಮಹಾರಾಷ್ಟ್ರ ಸರ್ಕಾರ ಈ ರೀತಿ ಪತ್ರ ಬರೆದಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಖಚಿತ ಮಾಹಿತಿ ಬಂದರಷ್ಟೇ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
Advertisement
ಮೆವಾನಿ, ರೈ ವಿರುದ್ಧದ ಪ್ರಕರಣ ವಾಪಸ್ಗೆ ಮನವಿವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಮತ್ತು ನಟ ಪ್ರಕಾಶ್ ರೈ ವಿರುದ್ಧ
ದಾಖಲಿಸಿರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಗೌರಿ ಲಂಕೇಶ್ ಟ್ರಸ್ಟ್ ಶುಕ್ರವಾರ ಗೃಹ ಸಚಿವರೂ ಆಗಿರುವ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿತು. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಉಪಮುಖ್ಯಮಂತ್ರಿಗಳನ್ನು ಭೇಟಿಯಾದ ಟ್ರಸ್ಟ್ನ ಸದಸ್ಯರು, ವಿಧಾನಸಭಾ ಚುನಾವಣೆ ವೇಳೆ ಮತೀಯ ಸಂಘಗಳು ಜಯಗಳಿಸಬಾರದೆಂಬ ಶೀರ್ಷಿಕೆಯಡಿ ರಾಜ್ಯದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಕಾರ್ಯಕ್ರಮದಲ್ಲಿ ಜಿಗ್ನೇಶ್ ಮೆವಾನಿ, ಪ್ರಕಾಶ್ ರೈ ಸೇರಿ ಅನೇಕರು ಪಾಲ್ಗೊಂಡಿದ್ದರು. ಆದರೆ, ಕೆಲವರು ಈ ಇಬ್ಬರ ವಿರುದಟಛಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನೀಡಿದ್ದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣ ಅನಗತ್ಯವಾಗಿರುವುದರಿಂದ ಅವುಗಳನ್ನು ಹಿಂಪಡೆಯುವಂತೆ ಮನವಿ ಮಾಡಿದರು. ಈ ವೇಳೆ ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್, ಪತ್ರಕರ್ತ ದಿನೇಶ್ ಅಮೀನ್ಮಟ್ಟು ಮತ್ತಿತರರು ಇದ್ದರು.