Advertisement

ಪ್ಲಾಸ್ಟಿಕ್ ಕವರ್ ತಿಂದ ಕಾಡಾನೆ ದೃಶ್ಯ ವೈರಲ್‌: ಬಂಡೀಪುರದ್ದಲ್ಲ ಎಂದು ಅಧಿಕಾರಿಗಳ ಸ್ಪಷ್ಟನೆ

08:57 PM Sep 22, 2022 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಹೆದ್ದಾರಿ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಅನ್ನು ಕಾಡಾನೆಯೊಂದು ತನ್ನ ಸೊಂಡಲಿನ ಮೂಲಕ ಎತ್ತಿಕೊಂಡು ತಿನ್ನುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರಿಸರ ಪ್ರೇಮಿಗಳು ಇದರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Advertisement

ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆದ್ದಾರಿ ಬದಿಯಲ್ಲಿ ನಡೆದಿದೆ ಎಂದು ಅಧಿಕ ಮಂದಿ ಬಿಂಬಿಸುತ್ತಿದ್ಧಾರೆ. ಆದರೆ ಇದು ಬಂಡೀಪುರದ್ದಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ನೆರೆಯ ತಮಿಳುನಾಡಿನ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ಕುಮಾರ್ ಪ್ರತಿಕ್ರಿಯೆ ನೀಡಿ, ಕಾಡಾನೆ ಪ್ಲಾಸ್ಟಿಕ್ ತಿನ್ನುತ್ತಿರುವ ದೃಶ್ಯ ಬಂಡೀಪುರದ ವ್ಯಾಪ್ತಿಯಲ್ಲಿ ನಡೆದಿಲ್ಲ. ಇದು ಪಕ್ಕದ ತಮಿಳುನಾಡಿನ ಮಧುಮಲೈ ಅರಣ್ಯ ಪ್ರದೇಶದಲ್ಲಿ ನಡೆದಿರುವುದು ಎಂದು ತಿಳಿಸಿದ್ಧಾರೆ.

Advertisement

Udayavani is now on Telegram. Click here to join our channel and stay updated with the latest news.

Next