Advertisement
ಬಡ ಮಕ್ಕಳಿಗೂ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಯುಪಿಎ ಸರ್ಕಾರದ ಅವಧಿ ಯಲ್ಲಿ ಅರ್ಎಂಎಸ್ಎ ಯೋಜನೆಯಡಿ 400ಕ್ಕೂ ಹೆಚ್ಚು ಆದರ್ಶ ವಿದ್ಯಾಲಯಗಳನ್ನು ಮಂಜೂರು ಮಾಡಲಾಗಿತ್ತು. ಮಾಜಿ ಸಂಸದ ಆರ್. ಧ್ರುವನಾರಾಯಣ ಪರಿಶ್ರಮದ ಫಲವಾಗಿ ತಾಲೂಕಿನಲ್ಲೂ ಅದರ್ಶ ವಿದ್ಯಾಲಯ ಶಾಲೆ ಆರಂಭಗೊಂಡಿತ್ತು.
Related Articles
Advertisement
ಸಮಸ್ಯೆ ನಡುವೆ ಉತ್ತಮ ಫಲಿತಾಂಶ: ಇಷ್ಟೆಲ್ಲ ಸಮಸ್ಯೆಗಳ ನಡುವೆಯೂ ಇರುವ ಕನಿಷ್ಠ ಸೌಲಭ್ಯಗಳನ್ನೇ ಬಳಸಿಕೊಂಡು ಇಲ್ಲಿ ಕಲಿತ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಶಾಲೆ ಆರಂಭವಾಗಿದ್ದನಿಂದಲೂ ಇದುವರೆಗೂ ಶೇ.100 ರಷ್ಟು ಫಲಿತಾಂಶ ದಾಖಲಿಸಿದ್ದಾರೆ. ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿ ಸುಪ್ರಿತ್ 625ಕ್ಕೆ 621 ಅಂಕ ಪಡೆದು ಜಿಲ್ಲೆಗೆ 2ನೇ ಮತ್ತು ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದನ್ನು ಸ್ಮರಿಸಬಹುದು.
ಕ್ಷೇತ್ರದ ಶಾಸಕರು, ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಸಂಬಂಧಪಟ್ಟವರು ಇನ್ನಾದರೂ ಎಚ್ಚೆತ್ತು ಪಟ್ಟಣದ ಆದರ್ಶ ವಿದ್ಯಾಲಯಕ್ಕೆ ಕೂಡಲೇ ಹಿಂದಿ ಮತ್ತು ಸಾಮಾನ್ಯ ವಿಜ್ಞಾನ ವಿಷಯದ ಕಾಯಂ ಶಿಕ್ಷಕರನ್ನು ನಿಯೋಜಿಸಬೇಕು. ಜೊತೆಗೆ ಕೂಡಲೇ ಪಠ್ಯ ಪುಸ್ತಕ, ಶೂ ವಿತರಿಸಿ, ಶಾಲೆಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕಿದೆ ಎಂದು ಪೋಷಕರು ಆಗ್ರಹಿಸಿದ್ದಾರೆ.
● ಬಿ.ನಿಂಗಣ್ಣ ಕೋಟೆ