Advertisement

ಅತ್ಯಾಚಾರ ಆರೋಪಿಗೆ 20 ವರ್ಷ ಸಜೆ

12:03 PM Jul 11, 2022 | Team Udayavani |

ಬೆಂಗಳೂರು: ಕೆಲಸ ಕೊಡಿಸುವುದಾಗಿ ಬೆಂಗಳೂರಿಗೆ ಕರೆತಂದು ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪಿಗೆ ಸೆಷನ್ಸ್‌ ಕೋರ್ಟ್‌ 20 ವರ್ಷ ಕಾರಾಗೃಹ ಶಿಕ್ಷೆ ಮತ್ತು ಐದು ಸಾವಿರ ದಂಡ ವಿಧಿಸಿದೆ.

Advertisement

ನಾಗಮಂಗಲ ತಾಲೂಕು ಬೆಳ್ಳೂರು ಹೋಬಳಿಯ ಕರಿಜೀರನಹಳ್ಳಿ ನಿವಾಸಿ ಮಂಜುನಾಥ್‌(27) ಅಪರಾಧಿ.

ಕರಿಜೀರನಹಳ್ಳಿಯಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಸಂತ್ರಸ್ತೆಗೆ ಆರೋಪಿ ಬೆಂಗಳೂರಿನಲ್ಲಿ ಕೆಲಸ ಕೊಡಿಸುತ್ತೇನೆ ಎಂದು 2017ರಲ್ಲಿ ಕರೆತಂದಿದ್ದ. ಬಳಿಕ ತಾನೂ ಕಾರು ಚಾಲಕನಾಗಿರುವ ಮನೆಯಲ್ಲಿಯೇ ಮನೆಗೆಲಸಕ್ಕೆ ಸೇರಿಸಿದ್ದ. ವಾರಾಂತ್ಯ ದಲ್ಲಿ ಶ್ರೀನಗರದಲ್ಲಿರುವ ತನ್ನ ಅಕ್ಕನ ಮನೆಗೆ ಕರೆದೊಯ್ದು ಕಾಫಿಯಲ್ಲಿ ಮತ್ತು ಬರುವ ಔಷಧಿ ಹಾಕಿ ಅತ್ಯಾಚಾರ ಎಸಗಿ ದ್ದಾನೆ. ಅದರಿಂದ ಸಂತ್ರಸ್ತೆ ಗರ್ಭಿಣಿಯಾಗಿದ್ದರು.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಯುವಕನಿಗೆ ಬ್ಲ್ಯಾಕ್‌ಮೇಲ್

ಈ ಸಂಬಂಧ ಹನುಮಂತನಗರ ಠಾಣೆ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿ, ಆರೋಪಪಟ್ಟಿ ಸಲ್ಲಿಸಿದ್ದರು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ತ್ವರಿತ ನ್ಯಾಯಾಲಯ ಅಪರಾಧಿ ಮಂಜುನಾಥ್‌ಗೆ ಶಿಕ್ಷೆ ವಿಧಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next