Advertisement

ಕುರುಬರ ಸಂಘದಲ್ಲಿ ಸಿದ್ದು ಬಣಕ್ಕೆ ಮೇಲುಗೈ

04:58 AM Jun 27, 2020 | Lakshmi GovindaRaj |

ಬೆಂಗಳೂರು: ರಾಜ್ಯ ಕುರುಬರ ಸಂಘದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಣಕ್ಕೆ ಭಾರೀ ಗೆಲುವು ಸಿಕ್ಕಿದೆ. ರಾಜ್ಯ ಕುರುಬರ ಸಂಘದ ಅಧ್ಯಕ್ಷರಾಗಿ ಮಾಜಿ ಸಿಎಂ ಸಿದ್ಧರಾಮಯ್ಯ  ಬೆಂಬಲಿಗರಾಗಿರುವ ಹಿರಿಯ ಮುಖಂಡ ಜಿ. ಕೃಷ್ಣ ಆಯ್ಕೆಯಾಗಿದ್ದಾರೆ.

Advertisement

ಇನ್ನೂ ಬಿಬಿಎಂಪಿ ಮಾಜಿ ಮೇಯರ್‌ ಡಿ.ವೆಂಕಟೇಶ್‌ ಮೂರ್ತಿ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.  ಕಾರ್ಯಾಧ್ಯಕ್ಷರಾಗಿ ಸುಬ್ರಮಣ್ಯ ಮತ್ತು  ಖಜಾಂಚಿಯಾಗಿ ದೇವರಾಜ್‌ ಆಯ್ಕೆಯಾಗುವ ಮೂಲಕ ಸಿದ್ಧರಾಮಯ್ಯ ಬಣ ಮೇಲುಗೈ ಸಾಧಿಸಿದೆ.

ರಾಜ್ಯ ಕುರುಬರ ಸಂಘದ ಚುಕ್ಕಾಣಿ ಹಿಡಿಯಲು ಸಿದ್ಧರಾಮಯ್ಯ ಮತ್ತು ಸಚಿವ ಕೆ.ಎಸ್‌.ಈಶ್ವರಪ್ಪ ಬಣ ಮಧ್ಯೆ ಹಲವು ಸುತ್ತಿನ  ಪ್ರಯತ್ನ ನಡೆದಿತ್ತು. ತೆರೆಮರೆಯಲ್ಲಿ ನಡೆದ ಸಂಧಾನ ಮಾತುಕತೆಗಳು ಫಲಪ್ರಧವಾಗದ ಹಿನ್ನೆಲೆಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಸಿದ್ಧರಾಮಯ್ಯ ಬಣದ ಮುಖಂಡರು ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next