Advertisement

ನಿರಾಶ್ರಿತರಿಗೆ ನಿವೇಶನ

09:27 AM Oct 11, 2017 | Team Udayavani |

ಬೆಂಗಳೂರು: ಗೋವಾದ ಬೈನಾ ಬೀಚ್‌ನಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ರಾಜ್ಯ ಸರ್ಕಾರವೇ ಜಮೀನು ಖರೀದಿಸಿ ನಿವೇಶನ ನೀಡಲು ನಿರ್ಧರಿಸಿದೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಗೋವಾ ದಲ್ಲಿ ನಿರಾಶ್ರಿತರಾದ ಕನ್ನಡಿಗರಿಗೆ ನಿವೇಶನ ನೀಡಲು ರಾಜ್ಯ ಸರ್ಕಾರವೇ 30 ಎಕರೆ ಜಮೀನು ಖರೀದಿಸಿ, ನಿರಾಶ್ರಿತರಾದ ಕನ್ನಡಿಗರ ಪ್ರತಿ ಕುಟುಂಬಕ್ಕೆ 20/30 ಅಳತೆಯ ನಿವೇಶನ ಒದಗಿಸಲು ಸರ್ಕಾರ ತೀರ್ಮಾನಿಸಿದೆ. ಗೋವಾದಲ್ಲಿ ನಿರಾಶ್ರಿತರಾದ ಕನ್ನಡಿಗರಿಗೆ ಮರು ವಸತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. 

ಮೊದಲ ಹಂತದಲ್ಲಿ ಅವರಿಗೆ ನಿವೇಶನ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಭೆ ನಂತರ ಮಾತನಾಡಿದ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ್‌, ಗೋವಾದ ಬೈನಾ ಬೀಚ್‌ನಲ್ಲಿ ನಿರಾಶ್ರಿತರಾಗಿರುವ 1,100 ಕನ್ನಡಿಗರಿಗೆ ಪುನರ್‌ ವಸತಿ ಕಲ್ಪಿಸಲು ಸರ್ಕಾರ ಸಮ್ಮತಿಸಿದೆ. ಕರ್ನಾಟಕ ಸರ್ಕಾರವೇ 30 ಎಕರೆ
ಜಮೀನು ಖರೀದಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ಜಮೀನು ಖರೀದಿಗೆ ಸುಮಾರು 70 ಕೋಟಿ ರೂ. ವೆಚ್ಚವಾಗಲಿದೆ. ಗೋವಾ ಸರ್ಕಾರ ಕನ್ನಡಿಗರಿಗೆ ಪುನರ್‌ ವಸತಿ ಕಲ್ಪಿಸಲು ಹಿಂದೇಟು ಹಾಕುತ್ತಿರುವುದರಿಂದ ರಾಜ್ಯ ಸರ್ಕಾರವೇ ಪುನರ್‌  ವಸತಿ ಕಲ್ಪಿಸಲು ನಿರ್ಧರಿಸಿದೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next