Advertisement

ಬಸ್‌ ಸೇವೆ ಆರಂಭ

12:19 PM Nov 05, 2019 | Team Udayavani |

ಹೊನ್ನಾಳಿ: ಹೊನ್ನಾಳಿ ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಿಂದ ಗ್ರಾಮಾಂತರ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು ನ.1ರಂದು ಕೆಎಸ್‌ಆರ್‌ಟಿಸಿ ಬಸ್‌ ಹೂವು, ಬಾಳೆ, ತಳಿರು ತೋರಣಗಳಿಂದ ಶೃಂಗಾರಗೊಂಡು ಕನ್ನಡ ಹಾಡುಗಳನ್ನು ಪ್ರಸಾರ ಮಾಡುತ್ತಾ ಹೊನ್ನಾಳಿಯಿಂದ ಭದ್ರಾವತಿ ನಗರಕ್ಕೆ ತೆರಳಿತು.

Advertisement

ಈ ಸಂದರ್ಭದಲ್ಲಿ ಗ್ರಾಮಾಂತರ ಪ್ರದೇಶಗಳಿಗೆ ಕೆಎಸ್‌ ಆರ್‌ಟಿಸಿ ಬಸ್‌ ಸಾರಿಗೆ ವ್ಯವಸ್ಥೆ ಮಾಡಿದ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಚಾಲನೆ ನೀಡಿ ಮಾತನಾಡಿ, ಕನ್ನಡದ ಬಗ್ಗೆ ಅಭಿಮಾನ, ಪ್ರೀತಿ ಸದಾ ಎಲ್ಲಾ ಕನ್ನಡಿಗರಲ್ಲಿ ಇರಬೇಕು. ಆಗ ಮಾತ್ರ ಭಾಷೆ ಬೆಳೆಯಲು ಸಾಧ್ಯ ಎಂದು ಹೇಳಿದರು. ತಹಶೀಲ್ದಾರ್‌ ತುಷಾರ್‌ ಬಿ.ಹೊಸೂರು, ಜಿ.ಪಂ ಪ್ರಭಾರಿ ಉಪಾಧ್ಯಕ್ಷ ಸುರೇಂದ್ರನಾಯ್ಕ, ಪಟ್ಟಣ ಪಂಚಾಯತ ಸದಸ್ಯ ಸುರೇಶ್‌ ಹೊಸಕೇರಿ, ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಕತ್ತಿಗೆ ಗಂಗಾಧರಪ್ಪ, ಬಸ್‌ ಕಂಡಕ್ಟರ್‌, ಚಾಲಕ ಹಾಗೂ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next