Advertisement

ಕಾನೂನು ಹೋರಾಟದಿಂದ ಅವಕಾಶವಂಚಿತ ರಾಜ್ಯ ಬಿಜೆಪಿ 

06:00 AM Sep 16, 2018 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿದ್ದರಿಂದ ವಿಧಾನ ಪರಿಷತ್ತಿನಲ್ಲಿ ಎರಡು ಸ್ಥಾನ ಕಳೆದುಕೊಳ್ಳುವಂತಾಗಿರುವ ಬಿಜೆಪಿ, ಕಾನೂನು ಹೋರಾಟಕ್ಕೆ ಯೋಚಿಸಿತ್ತಾದರೂ ಅದಕ್ಕೆ ಅವಕಾಶ ಇಲ್ಲದಂತಾಗಿದೆ. 

Advertisement

ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಅ.3ರಂದು ಚುನಾವಣೆ ನಡೆಯಲಿದ್ದು,ಮೂರೂ ಸ್ಥಾನಗಳಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿರುವುದರಿಂದ ಒಬ್ಬ ಅಭ್ಯರ್ಥಿ ಗೆಲ್ಲಲು 112 ಮತಗಳು ಬೇಕಾಗುತ್ತವೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟ 118 ಸ್ಥಾನ ಹೊಂದಿರುವುದರಿಂದ ವಿಧಾನಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದರೂ (104 ಶಾಸಕರು) ಬಿಜೆಪಿಗೆ ಮೇಲ್ಮನೆಯಲ್ಲಿ ಒಂದೂ ಸ್ಥಾನ ಗಳಿಸಲು ಸಾಧ್ಯವಿಲ್ಲದಂತಾಗಿದೆ. 

ಈ ಹಿನ್ನೆಲೆಯಲ್ಲಿ ಅಧಿಸೂಚನೆ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಮುಂದಾದ ಬಿಜೆಪಿ, ಈ ಕುರಿತಂತೆ ಕಾನೂನು ತಜ್ಞರು ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದಿತ್ತು. ನಿಯಮಾನುಸಾರ ಅವಧಿ ಮುಗಿದ ಸಂದರ್ಭದಲ್ಲಿ ಚುನಾವಣೆ ನಡೆಸಿದರೆ ಒಂದೇ ಅಧಿಸೂಚನೆ ಹೊರಡಿಸಬೇಕು. ಅವಧಿ ಪೂರ್ವ ಚುನಾವಣೆ ನಡೆದರೆ ಪ್ರತ್ಯೇಕ ಅಧಿಸೂಚನೆ ಹೊರಡಿಸಬೇಕು ಎಂದು ಕಾನೂನು ತಜ್ಞರು ಮತ್ತು ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ವಿಚಾರದಲ್ಲಿ ಸುಮ್ಮನಾಗಲು ಬಿಜೆಪಿ ನಿರ್ಧರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next