ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದ ದೃಷ್ಟಿಯಲ್ಲಿ ರಾಜ್ಯ ಬಜೆಟ್ ಆಶಾದಾಯಕವಾಗಿದೆ. ಆದರೆ ಇದರ ಅನುಷ್ಠಾನ ಎಷ್ಟರ ಮಟ್ಟಿಗೆ ಆಗಲಿದೆ ಎಂಬುದು ಮುಖ್ಯ. ಹಾಗೆಯೇ ಆರೋಗ್ಯ ಕ್ಷೇತ್ರದ ನಿರ್ವಹಣೆ ಅತ್ಯಂತ ಪ್ರಮುಖ ಸಂಗತಿಯಾಗಿದೆ.
Advertisement
ಇಂದು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳು ನಿರ್ಮಾಣಗೊಳ್ಳುತ್ತಿವೆ. ಆದರೆ ಇದರ ನಿರ್ವಹಣೆ ಮತ್ತು ಆರೋಗ್ಯ ಸೇವೆಗಳನ್ನು ನೀಡುವ ಮಾನವ ಸಂಪನ್ಮೂಲದ ಕೊರತೆ ಎದ್ದು ಕಾಣುತ್ತಿದೆ. ಆರೋಗ್ಯ ಮತ್ತು ವೈದ್ಯಕೀಯ ಸೇವಾ ರಂಗದಲ್ಲಿ ಮಾನವ ಸಂಪನ್ಮೂಲ ಸೃಷ್ಟಿಸುವ ಪ್ರಯತ್ನವನ್ನು ಸರ್ಕಾರ ಮಾಡಬಹುದಿತ್ತು.
ಬೆಂಗಳೂರಿನಂತಹ ನಗರದ ನಾಲ್ಕು ದಿಕ್ಕಿನಲ್ಲೂ 300 ಬೆಡ್ಗಳ ಅತ್ಯಾಧುನಿಕ ಆಸ್ಪತ್ರೆಗಳನ್ನು ನಿರ್ಮಾಣ ಮಾಡಬೇಕು. ನಮ್ಮ ಜಯದೇವವೇ ಆರಂಭಗೊಂಡಿದ್ದಾಗ ನಗರದ ಹೊರ ವಲಯದಲ್ಲಿತ್ತು. ಆದರೆ ಈಗ ನಗರ ವಿಸ್ತಾರಗೊಂಡು ಜಯದೇವ ಆಸ್ಪತ್ರೆಯೇ ಹೃದಯ ಭಾಗಕ್ಕೆ ಬಂದು ಬಿಟ್ಟಿದೆ. ಆದ್ದರಿಂದ ನಗರದ ಹೊರ ವಲಯದ ನಾಲ್ಕು ದಿಕ್ಕಿನಲ್ಲೂ ಆಸ್ಪತ್ರೆ ನಿರ್ಮಿಸುವ ಪ್ರಸ್ತಾಪವನ್ನು ಬಜೆಟ್ ಹೊಂದಿರಬೇಕಿತ್ತು. ಇನ್ನು ಸರ್ಕಾರಿ ಯೋಜನೆಗಳಾದ ಆಯುಷ್ಮಾನ್ ಭಾರತ್ ಮತ್ತು ಯಶಸ್ವಿನಿ ಯೋಜನೆ ಸರ್ಕಾರಿ ಆಸ್ಪತ್ರೆಗಳಿಗೆ ಸೀಮಿತವಾಗಿರುವುದರಿಂದ ಸರ್ಕಾರಿ ಆಸ್ಪತ್ರೆಗಳ ಮೇಲೆ ಭಾರೀ ಹೊರೆ ಬಿದ್ದಿದೆ. ಈ ಯೋಜನೆಯನ್ನು ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸುವ ಮೂಲಕ ಸರ್ಕಾರಿ ಆಸ್ಪತ್ರೆಗಳ ಮೇಲಿನ ಭಾರ ಕಡಿಮೆ ಮಾಡಬಹುದು. ಆದರೆ ಇದಕ್ಕಿಂತ ಮುಂಚಿತವಾಗಿ ಯೋಜನೆಯಡಿಯಲ್ಲಿನ ಚಿಕಿತ್ಸೆಗಳ ದರ ಪರಿಷ್ಕರಣೆ ಆಗಬೇಕು.
Related Articles
Advertisement
ಎಲ್ಲ ಮೆಡಿಕಲ್ ಕಾಲೇಜ್ಗಳಲ್ಲಿ ಸಣ್ಣ ಸಣ್ಣ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ತೆರೆಯಬೇಕು. ಮೊದಲ ಮತ್ತು ಎರಡನೇ ಹಂತದ ಕ್ಯಾನ್ಸರ್ಗೆ ಅಲ್ಲೇ ಚಿಕಿತ್ಸೆ ಸಿಗುವಂತೆ ಮಾಡುವ ಕ್ರಮ ಕೈಗೊಳ್ಳಬೇಕಿತ್ತು.